Breaking News

ಕನ್ನಡಮ್ಮ ಮಡಿಲಿಗೆ ಪಾಪು‌ ಪ್ರಶಸ್ತಿ

Spread the love

ಧಾರವಾಡ : ಪಾಟೀಲ್ ಪುಟ್ಟಪ್ಪನವರ ಪತ್ರಿಕೋದ್ಯಮದಲ್ಲಿ ಕನ್ನಡದ ಯೋಧರು. ಅವರ ಹೆಸರಿನಲ್ಲಿ ‌ನೀಡುವ ಪ್ರಶಸ್ತಿಯನ್ನು ಕನ್ನಡಮ್ಮ ದಿನಪತ್ರಿಕೆಗೆ ಕೊಡುತ್ತಿರುವುದು‌‌‌ ಅಭಿಮಾನದ ಸಂಗತಿ ಎಂದು ಉನ್ನತ ಶಿಕ್ಷಣ ಅಕಾಡೆಮಿ ವಿಶ್ರಾಂತ ನಿರ್ದೇಶಕ ಡಾ. ಎಂ.ಎಸ್.ಶಿವಪ್ರಸಾದ ಹೇಳಿದರು.

ಭಾನುವಾರ ಕರ್ನಾಟಕ ವಿಧ್ಯಾವರ್ಧಕ ಸಂಘದ 135ನೇ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಕನ್ನಡದ ಪ್ರಪಂಚ ನಾಡೋಜ ಡಾ. ಪಾಟೀಲ್ ಪುಟ್ಟಪ್ಪನವರ ಸವಿ ನೆನಪಿನಲ್ಲಿ ಕೊಡಮಾಡುವ ಡಾ. ಪಾಟೀಲ್ ಪುಟ್ಟಪ್ಪನವರ ಪ್ರಶಸ್ತಿಯನ್ನು ಕನ್ನಡಮ್ಮ ದಿನಪತ್ರಿಕೆಯ ಸಂಪಾದಕ ರಾಜಕುಮಾರ ಟೋಪಣ್ಣವರ ಅವರಿಗೆ ಸನ್ಮಾನಿಸಿ ಗೌರವಿಸಲಾಯಿತು.ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕನ್ನಡಮ್ಮ ದಿನಪತ್ರಿಕೆ ಸಮಾಜದ ಕನ್ನಡಿಯಾಗಿ ಗಡಿ ಭಾಗದ ಜನರ ಸಮಸ್ಯೆಯನ್ನು ರಾಜ್ಯ ಹಾಗೂ ಕೇಂದ್ರ ಸರಕಾರಕ್ಕೆ ತಲುಪಿಸಿ ಪರಿಹಾರ ಕಲ್ಪಿಸುವಲ್ಲಿ ನಿರಂತರವಾಗಿ ಕೆಲಸ ಮಾಡುತ್ತಿರುವುದು ಹೆಮ್ಮೆಯ ಸಂಗತಿ ಎಂದರು.


Spread the love

About Laxminews 24x7

Check Also

ಹಾಸ್ಟೆಲ್ ನಾಲ್ಕನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

Spread the loveಹುಬ್ಬಳ್ಳಿ: ಕಾಲೇಜಿನ ವಿದ್ಯಾರ್ಥಿಯೊಬ್ಬ ಹಾಸ್ಟೆಲ್ ನಾಲ್ಕನೇ ಮಹಡಿಯಿಂದ ಬಿದ್ದು ಅನುಮಾನಸ್ಫದವಾದ ರೀತಿಯಲ್ಲಿ ಸಾವನ್ನಪ್ಪಿದ ಘಟನೆ ಭೈರಿದೇರಕೊಪ್ಪದಲ್ಲಿರುವ ಸನಾ ಕಾಲೇಜಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ