Breaking News

ಕುರಿ, ಮೇಕೆಗಳಿಗೆ ಜಂತುನಾಶಕ ಔಷಧ ವಿತರಣೆ

Spread the love

ಬೈಲಹೊಂಗಲ: ಪಟ್ಟಣ ಸೇರಿದಂತೆ ತಾಲ್ಲೂಕಿನಲ್ಲಿ ಕುರಿಗಾರರು ನೆಲೆಸಿದ ಸ್ಥಳಗಳಿಗೆ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಸುಭಾಷ ಸಂಪಗಾವಿ ಹಾಗೂ ಮುಖ್ಯ ಪಶುವೈಧ್ಯಾಧಿಕಾರಿ ಡಾ.ಶ್ರೀಕಾಂತ ಗಾಂವಿ ಅವರು ಕುರಿಗಳಿಗೆ ಸಾಂಕ್ರಾಮಿಕ ರೋಗಗಳು ಹರಡದಂತೆ ಮುಂಜಾಗ್ರತಾ ಔಷಧಗಳನ್ನು ವಿತರಿಸಿದರು.

 

ಪಶು ಇಲಾಖೆ ಸಂಯುಕ್ತ ಆಶ್ರಯದಲ್ಲಿ ವಿತರಿಸುವ ಔಷಧೋಪಚಾರಗಳನ್ನು ಕಡ್ಡಾಯವಾಗಿ ಪಡೆದುಕೊಂಡು ಪ್ರಸ್ತುತ ದಿನಗಳಲ್ಲಿ ಕುರಿ ಮತ್ತು ಆಡುಗಳಿಗೆ ಹಲವಾರು ರೀತಿಯ ಕಾಯಿಲೆಗಳು, ಕಾಲುಬೆನಿ ಮತ್ತು ಸಾಂಕ್ರಮಿಕ ರೋಗಗಳು ಹರಡದಂತೆ ಎಚ್ಚರವಹಿಸಬೇಕು. ಹೆಚ್ಚಿನ ಪ್ರಮಾಣದಲ್ಲಿ ಕುರಿ ತಳಿಗಳನ್ನು ಅಭಿವೃದ್ಧಿ ಪಡಿಸಿಕೊಂಡು ಸ್ವಾವಲಂಭಿ ಬದುಕು ಕಟ್ಟಿಕೊಳ್ಳಬೇಕು ಎಂದರು.

ಗ್ರಾಮೀಣ ಪ್ರದೇಶ ಕುರಿಗಾಯಿಗಳಿಗೆ ನರೇಗಾ ಯೋಜನೆಯಲ್ಲಿ ಸಮುದಾಯ, ವೈಯಕ್ತಿಕ ಆಡು, ಕುರಿ ಶೆಡ್ಡ್‌ ಗಳನ್ನು ನಿರ್ಮಾಣ ಮಾಡಿಕೊಳ್ಳಲು ಅವಕಾಶವಿರುತ್ತದೆ. ಅದನ್ನು ಸದುಪಯೋಗ ಪಡೆಸಿಕೊಂಡು ಕುರಿ ಸಂತತಿಯನ್ನು ಅಭಿವೃದ್ಧಿ ಪಡಿಸಿರಿ ಇಒ ಸುಭಾಷ ಸಂಪಗಾವಿ ತಿಳಿಸಿದರು.


Spread the love

About Laxminews 24x7

Check Also

ಬಾಗಲಕೋಟೆ: ಹಳ್ಳಕ್ಕೆ ಬಿದ್ದ ಬಾಲಕ, ಕಾಪಾಡಲು ಹೋದ ಯುವಕ ನೀರುಪಾಲು

Spread the loveಬಾಗಲಕೋಟೆ: ಮಳೆಯಿಂದಾಗಿ ತುಂಬಿ ಹರಿಯುತ್ತಿದ್ದ ಹಳ್ಳದಲ್ಲಿ ಮುಳುಗಿ ಇಬ್ಬರು ಮೃತಪಟ್ಟಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಇಳಕಲ್​ ತಾಲೂಕಿನ ಚಿಕನಾಳ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ