ಬೆಂಗಳೂರು : ನ.25ರಂದು ರಾಜ್ಯ ರಾಜಕಾರಣದಲ್ಲಿ ಏನೇನು ಆಗುತ್ತೆ ? ನೋಡ್ತಾಯಿರಿ ಎಂದಿದ್ದ ಶಾಸಕ ಬಸನಗೌಡ ಯತ್ನಾಳ ಹೇಳಿಕೆ ನಿಜವಾಗಲಿದಿಯಾ ? ಎಂಬ ಕುತೂಹಲ ರಾಜ್ಯ ರಾಜಕಾರಣದಲ್ಲಿ ಮೂಡಿದೆ.
ಮೇಲಿನವರಿಗೂ ಯಡಿಯೂರಪ್ಪ ಸಾಕಾಗಿದ್ದಾರೆ, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇನ್ನು ಬಹಳ ದಿನ ಅಧಿಕಾರದಲ್ಲಿ ಇರುವುದಿಲ್ಲ. ಮುಂದಿನ ಉತ್ತರಾಧಿಕಾರಿ ಉತ್ತರ ಕರ್ನಾಟಕದವರೇ ಆಗುತ್ತಾರೆ. ಪ್ರಧಾನಿ ಮಂತ್ರಿಗಳ ಮನಸ್ಸಿನಲ್ಲಿ ಈ ವಿಚಾರ ಬಂದಿದೆ. ಯಡಿಯೂರಪ್ಪ ಬಳಿಕ ಉತ್ತರ ಕರ್ನಾಟಕವದವರಿಗೆ ಸಿಎಂ ಮಾಡೋಣ ಎಂದಿದ್ದಾರೆ. ಅದೂ ಕೂಡ ಬಹುತೇಕ ಫೈನಲ್ ಆಗಿದೆ ಎಂದು ಹೇಳಿಕೆ ನೀಡಿದ್ದರು.
ನವೆಂಬರ್ 25 ನಂತರ, ಡಿಸೆಂಬರ್ ವೇಳೆಗೆ ಮುಖ್ಯಮಂತ್ರಿ ಬದಲಾವಣೆ ಖಚಿತವೆನ್ನುವ ಮಾಹಿತಿಯನ್ನು ಯತ್ನಾಳ್ ಹೇಳಿದ್ದರು. ಈಗ ನ.25ಕ್ಕೆ ಒಂದೇ ದಿನ ಬಾಕಿ ಇರುವ ಹಿನ್ನೆಲೆ ಯತ್ನಾಳ್ ನೀಡಿರುವ ಹೇಳಿಕೆ ಭಾರೀ ಕುತೂಹಲ ಕೆರಳಿಸಿದೆ. ರಾಜ್ಯ ರಾಜಕರಣದಲ್ಲಿ ಮುಂದೇನಾಗಲಿದೆ ಎಂಬುದು ಕುತೂಹಲಕ್ಕೆ ಕಾರಣವಾಗಿದೆ.
ರಾಜ್ಯ ಸಚಿವ ಸಂಪುಟ ವಿಸ್ತರಣೆ ಅಥವಾ ಪುನಾರಚನೆ, ಜೊತೆಗೆ ನಾಯಕತ್ವ ಬದಲಾವಣೆಯ ಮಾತುಗಳು ಕೂಡ ಕೇಳಿ ಬರುತ್ತಿದ್ದು ಕುತೂಹಲವನ್ನ ಹೆಚ್ಚಿಸಿದೆ. ಆ ದಿನ ಆಗುವ ಬದಲಾವಣೆಯ ಬೆಳವಣಿಗೆಯನ್ನು ತಿಳಿದುಕೊಳ್ಳವ ಕುತೂಹಲ ಎಲ್ಲರಿಗಿದೆ.