Breaking News

ಪ್ರಾಮಾಣಿಕ ಅಧಿಕಾರಿ ಮೇಲೆ ಕ್ರಮವಾಗದಿರಲಿ: ರೈತ ಸಂಘಟನೆಗಳ ಆಗ್ರಹ

Spread the love

ಬೆಳಗಾವಿ: ‘ವಿವಿಧ ರೈತ ಸಂಘಟನೆಯವರು ಭೂದಾಖಲೆಗಳ ಇಲಾಖೆ ಬೆಳಗಾವಿ ಉಪನಿರ್ದೇಶಕರಿಗೆ ತೊಂದರೆ ನೀಡುತ್ತಿದ್ದಾರೆ. ಆದರೆ, ಪ್ರಾಮಾಣಿಕ ಅಧಿಕಾರಿಗೆ ಯಾವ ತೊಂದರೆಯಾಗದಂತೆ ಕ್ರಮ ವಹಿಸಬೇಕು’ ಎಂದು ಆಗ್ರಹಿಸಿ ರಾಷ್ಟ್ರೀಯ ರೈತ ಸಂಘ ಹಾಗೂ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಕಾರ್ಯಕರ್ತರು ಜಿಲ್ಲಾಡಳಿತಕ್ಕೆ ಸೋಮವಾರ ಮನವಿ ಸಲ್ಲಿಸಿದರು.

 

‘ಭೂದಾಖಲೆಗಳ ಇಲಾಖೆ ಉಪನಿರ್ದೇಶಕರು ನಿಯಮಾನುಸಾರ ಕೆಲಸ ಮಾಡುತ್ತಿದ್ದಾರೆ. ಹಲವು ಪ್ರಕರಣಗಳ ವಿಚಾರಣೆ ನಡೆಸಿ, ರೈತರಿಗೆ ಅನ್ಯಾಯವಾಗದಂತೆ ಕ್ರಮ ವಹಿಸಿದ್ದಾರೆ. ಅಂಥವರ ವಿರುದ್ಧ ದುರುದ್ದೇಶದಿಂದ ಪ್ರತಿಭಟನೆ ನಡೆಸುವುದು ಸರಿಯಲ್ಲ’ ಎಂದರು.

ಮುಖಂಡರಾದ ಚೂನಪ್ಪ ಪೂಜೇರಿ, ಗುರುನಾಥ ಹುಕ್ಕೇರಿ, ಕುಮಾರ ಮರದಿ, ಮಹೇಶ ಸುಬೇದಾರ, ಶಶಿಕಾಂತ ಪಡಸಲಗಿ ಇತರರಿದ್ದರು.


Spread the love

About Laxminews 24x7

Check Also

ಕಾಂಗ್ರೆಸ್ ಪಕ್ಷಕ್ಕೆ ಮುಜುಗರಕ್ಕಿಡಾಗಿಸಿದ ಬಿಜೆಪಿ; ನಾಟಿ ಕೋಳಿ ಸರ್ಕಾರದ ಘೋಷಣೆಗಳು* ನಾಟಿ ಕೋಳಿ ಸರ್ಕಾರಕ್ಕೆ ವಿಜಯಪುರದಲ್ಲಿ ಬಿಜೆಪಿ ಸೆಡ್ಡು!

Spread the love ಕಾಂಗ್ರೆಸ್ ಪಕ್ಷಕ್ಕೆ ಮುಜುಗರಕ್ಕಿಡಾಗಿಸಿದ ಬಿಜೆಪಿ; ನಾಟಿ ಕೋಳಿ ಸರ್ಕಾರದ ಘೋಷಣೆಗಳು* ನಾಟಿ ಕೋಳಿ ಸರ್ಕಾರಕ್ಕೆ ವಿಜಯಪುರದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ