Breaking News

ಕೃಷಿ ಕಾಯ್ದೆ ಹಿಂಪಡೆಯಲು ರೈತ ಸಂಘಟನೆಗಳ ಆಗ್ರಹ

Spread the love

ಬೆಳಗಾವಿ: ತಮಗೆ ಮಾರಕವಾದ ಮೂರು ಕೃಷಿ ಕಾಯ್ದೆಗಳನ್ನು ರದ್ದುಪಡಿಸಬೇಕು. ರೈತರ ಸಾಲ ಮನ್ನಾ ಮಾಡಬೇಕು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ರೈತರು ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.

ಬೆಳಗಾವಿ | ಕೃಷಿ ಕಾಯ್ದೆ ಹಿಂಪಡೆಯಲು ರೈತ ಸಂಘಟನೆಗಳ ಆಗ್ರಹ

ಇಲ್ಲಿನ ರಾಣಿ ಚನ್ನಮ್ಮನ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಮೆರವಣಿಗೆ ನಡೆಸಿದ ಪ್ರತಿಭಟನಕಾರರು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯದ ವಿವಿಧ ಸಕ್ಕರೆ ಕಾರ್ಖಾನೆಗಳು ಬಾಕಿ ಉಳಿಸಿಕೊಂಡಿರುವ ಕಬ್ಬಿನ ಬಿಲ್‌ ಪಾವತಿಸಬೇಕು. ಬರದಿಂದ ತತ್ತರಿಸಿದ ರೈತರಿಗೆ ತ್ವರಿತವಾಗಿ ಬೆಳೆ ಹಾನಿ ಪರಿಹಾರ ವಿತರಿಸಬೇಕು. ರೈತರ ವಾಹನಗಳನ್ನು ಪೊಲೀಸರು ಅನಗತ್ಯವಾಗಿ ತಡೆಗಟ್ಟಿ ತೊಂದರೆ ನೀಡುವುದನ್ನು ನಿಲ್ಲಿಸಬೇಕು. ಕೃಷಿ ಪಂಪ್‌ಸೆಟ್‌ಗಳಿಗೆ ಹಗಲಿನಲ್ಲಿ 7 ತಾಸು ತ್ರಿಫೇಸ್‌ ವಿದ್ಯುತ್‌ ನೀಡಬೇಕು ಎಂದು ಆಗ್ರಹಿಸಿದರು.


Spread the love

About Laxminews 24x7

Check Also

ಬರಗೂರು ರಾಮಚಂದ್ರಪ್ಪನವರ ವ್ಯಕ್ತಿತ್ವ ಎಲ್ಲರಿಗೂ ಮಾದರಿ; ಎಸ್.ಐ. ಬಿರಾದಾರ

Spread the love ಬರಗೂರು ರಾಮಚಂದ್ರಪ್ಪನವರ ವ್ಯಕ್ತಿತ್ವ ಎಲ್ಲರಿಗೂ ಮಾದರಿ; ಎಸ್.ಐ. ಬಿರಾದಾರ ಬಸವರಾಜ ಕಟ್ಟಿಮನಿ ಕಾದಂಬರಿ ಪ್ರಶಸ್ತಿ ಪ್ರದಾನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ