Breaking News

ಗಡ್ಕರಿ,ಕೋರೆ ಭೇಟಿ: ಚರ್ಚೆ

Spread the love

ಬೆಳಗಾವಿ: ನವದೆಹಲಿಯಲ್ಲಿ ಕೇಂದ್ರ ಭೂಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಅವರನ್ನು ಕೆಎಲ್‌ಇ ಸಂಸ್ಥೆಯ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ ಭೇಟಿಯಾಗಿ, ವಿವಿಧ ಕಾಮಗಾರಿಗಳ ಕುರಿತು ಚರ್ಚಿಸಿದರು.

‘ಅಥಣಿ ತಾಲ್ಲೂಕಿನ ಮುರಗುಂಡಿಯಿಂದ ಕಾಗವಾಡ, ಚಿಕ್ಕೋಡಿ ಮಾರ್ಗವಾಗಿ ಗೋಟೂರವರೆಗೆ (87 ಕಿ.ಮೀ) ಚತುಷ್ಪಥ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ, ಶಿರಗುಪ್ಪಿಯಿಂದ ಅಂಕಲಿಯವರೆಗೆ ಮೇಲ್ಸೇತುವೆ ನಿರ್ಮಾಣ ಕಾಮಗಾರಿ ಮಂಜೂರುಗೊಳಿಸಿರುವುದು ಸ್ವಾಗತಾರ್ಹ.

ಈ ಕಾಮಗಾರಿ ಬೇಗ ಆರಂಭಿಸಬೇಕು’ ಎಂದು ಕೋರಿದರು.

‘ನವೀಕರಿಸಬಹುದಾದ ಎಥೆನಾಲ್ ಬಳಕೆಯಿಂದ ರೈತರಿಗೆ ಆರ್ಥಿಕವಾಗಿ ಸದೃಢವಾಗಲು ಸಾಧ್ಯವಿದೆ. ಹಾಗಾಗಿ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಎಥೆನಾಲ್ ಬಳಸುವ ಘಟಕಗಳು ಭಾರತ ಮತ್ತು ಕರ್ನಾಟಕದಲ್ಲಿ ರೂಪುಗೊಳ್ಳಬೇಕು’ ಎಂದು ಮನವಿ ಮಾಡಿದರು. ಕೆಎಲ್‌ಇ ಸಂಸ್ಥೆಯ ನಿರ್ದೇಶಕ ಮಹಾಂತೇಶ ಕವಟಗಿಮಠ ಇದ್ದರು


Spread the love

About Laxminews 24x7

Check Also

ಏಪ್ರಿಲ್‌ಗೆ ಜಿಬಿಎ, ಸ್ಥಳೀಯ ಸಂಸ್ಥೆ ಚುನಾವಣೆ ಸಿದ್ಧತೆಗೆ ಜಿಲ್ಲಾಧಿಕಾರಿಗಳಿಗೆ ಆಯೋಗ ಸೂಚನೆ

Spread the loveಬೆಂಗಳೂರು:ಕಳೆದ ನಾಲ್ಕೈದು ವರ್ಷಗಳಿಂದ ಒಂದಿಲ್ಲೊಂದು ಕಾರಣಗಳಿಂದ ಪದೇ ಪದೇ ಮುಂದೂಡಲಾಗಿದ್ದ ಕರ್ನಾಟಕ ಸ್ಥಳೀಯ ಸಂಸ್ಥೆಗಳ ಚುನಾವಣೆಯು ಮುಂಬರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ