Breaking News

ಮನೆಗಳಿಗೆ ನುಗ್ಗಿದ ನೀರು; ಆಕ್ರೋಶ

Spread the love

ಬೆಳಗಾವಿ: ನಗರವೂ ಸೇರಿದಂತೆ ತಾಲ್ಲೂಕಿನಾದ್ಯಂತ ಸುರಿಯುತ್ತಿರುವ ಮಳೆ ಹಲವು ಅವಾಂತರ ಸೃಷ್ಟಿಸಿದೆ.

ಸತತ ಮಳೆಯಿಂದಾಗಿ ನಗರದ ಹೊರವಲಯದ ಬಸವನ ಕುಡಚಿಯ ಹಲವು ಮನೆಗಳು, ಅಂಗಡಿಗಳಿಗೆ ನೀರು ನುಗ್ಗಿ, ಜನರು ಪರದಾಡುವಂತಾಯಿತು. ಕೆಎಲ್‌ಇ ಸಂಕಲ್ಪ ವೆಲ್‌ನೆಸ್‌ ಸೆಂಟರ್‌ಗೆ ಸಹ ನೀರು ನುಗ್ಗಿದ ಪರಿಣಾಮ ಔಷಧಗಳು ಮತ್ತು ವೈದ್ಯಕೀಯ ಪರಿಕರಗಳಿಗೆ ಹಾನಿಯಾಯಿತು.

ಈ ನೀರು ಹೊರಹಾಕಲು ಮಹಾನಗರ ಪಾಲಿಕೆಯವರು ಬುಧವಾರ ಬೆಳಿಗ್ಗೆಯಿಂದ ದುರಸ್ತಿ ಕಾರ್ಯ ಕೈಗೊಳ್ಳುತ್ತಿರುವುದು ಕಂಡುಬಂತು.ಮನೆಗಳಿಗೆ ನುಗ್ಗಿದ ನೀರು; ಆಕ್ರೋಶ

‘ವಾರದಿಂದ ನಮ್ಮಲ್ಲಿ ಸತತ ಮಳೆಯಾಗುತ್ತಿದೆ. ಈ ಹಿಂದೆ ದೇವರಾಜ ಅರಸ್‌ ಕಾಲೊನಿಯಿಂದ ಮಳೆನೀರು ನೀರು ಹರಿದುಹೋಗಿ ಬಳ್ಳಾರಿ ನಾಲೆ ಸೇರುತ್ತಿತ್ತು. ಆದರೆ, ಚರಂಡಿಗಳೆಲ್ಲ ಬ್ಲಾಕ್‌ ಆಗಿದ್ದರಿಂದ ಬಸವನ ಕುಡಚಿಗೆ ನೀರು ನುಗ್ಗಿ ನಾವು ತೊಂದರೆ ಅನುಭವಿಸುವಂತಾಗಿದೆ’ ಎಂದು ವ್ಯಾಪಾರಿ ದೇವಪ್ಪ ಕಡೇಮನಿ ಅವಲತ್ತುಕೊಂಡರು.

ಪೀರನವಾಡಿಯಲ್ಲೂ ಸಮಸ್ಯೆ: ಪೀರನವಾಡಿಯ ಸಿದ್ಧೇಶ್ವರ ಗಲ್ಲಿ, ಲಕ್ಷ್ಮಿ ಗಲ್ಲಿ, ಪಾಟೀಲ ಗಲ್ಲಿ, ಮಹಾವೀರ ಗಲ್ಲಿಯಲ್ಲಿ 20ಕ್ಕೂ ಅಧಿಕ ಮನೆಗಳಿಗೆ ನುಗ್ಗಿದ್ದ ಮಳೆ ನೀರು ಹೊರಹಾಕಲು ಜನರು ಪ್ರಯಾಸಪಟ್ಟರು.‌

‘ನಮ್ಮ ಮನೆಗೆ ನೀರು ನುಗ್ಗಿ ತೊಂದರೆಯಾದರೂ ಅಧಿಕಾರಿಗಳು ಸ್ಪಂದಿಸುತ್ತಿಲ್ಲ’ ಎಂದು ಆರೋಪಿಸಿ ಪಟ್ಟಣ ಪಂಚಾಯ್ತಿ ಕಚೇರಿಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದರು.


Spread the love

About Laxminews 24x7

Check Also

ಇವರಿಗೆ ಅಧಿಕಾರ ಒಂದೇ ಕುಟುಂಬದ ಕೈಯಲ್ಲಿರಬೇಕು, ಹೆಣ್ಣುಮಕ್ಕಳು ಅಳುತ್ತಿದ್ದರೆ ಕಾಂಗ್ರೆಸ್, ಮಿತ್ರಪಕ್ಷಗಳು ಹಬ್ಬ ಮಾಡುತ್ತಿವೆ: ಮೋದಿ ಆಕ್ರೋಶ

Spread the loveನವದೆಹಲಿ: ಕುಟುಂಬ ರಾಜಕಾರಣ ಮಾಡುವ ಪಕ್ಷಗಳು ಮಹಿಳೆಯರ ಸಬಲೀಕರಣವಾದರೆ ತಮ್ಮ ಆಂತರಿಕ ಅಧಿಕಾರ ಅಧಿಕಾರಕ್ಕೆ ಧಕ್ಕೆಯಾಗಬಹುದು ಎಂಬ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ