Breaking News

ಪುಣೆಯಲ್ಲಿ ಭಾರಿ ಮಳೆ | ಅಗತ್ಯಬಿದ್ದರೆ ಜನರನ್ನು ಏರ್‌ಲಿಫ್ಟ್ ಮಾಡುತ್ತೇವೆ: ಶಿಂದೆ

Spread the love

ಪುಣೆ: ಅಗತ್ಯವೆನಿಸಿದರೆ ಪುಣೆಯಲ್ಲಿ ಮಳೆ ಸಂತ್ರಸ್ತರನ್ನು ವಾಯು ಮಾರ್ಗದ ಮೂಲಕ ಸ್ಥಳಾಂತರಿಸಲಾಗುವುದು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂದೆ ಹೇಳಿದ್ದಾರೆ.

ಪುಣೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದು, ತಗ್ಗು ಪ್ರದೇಶಗಳು ಜಲಾವೃತವಾಗಿವೆ. ನೂರಾರು ಮನೆಗಳಿಗೆ ನೀರು ನುಗ್ಗಿದೆ.ಪುಣೆಯಲ್ಲಿ ಭಾರಿ ಮಳೆ | ಅಗತ್ಯಬಿದ್ದರೆ ಜನರನ್ನು ಏರ್‌ಲಿಫ್ಟ್ ಮಾಡುತ್ತೇವೆ: ಶಿಂದೆ

ಮಳೆ ಸಂಬಂಧಿತ ಅವಘಡಗಳಿಂದಾಗಿ ನಾಲ್ಕು ಮಂದಿ ಮೃತಪಟ್ಟಿದ್ದಾರೆ

ಪುಣೆ ಜಿಲ್ಲಾಧಿಕಾರಿ, ಪಾಲಿಕೆ ಅಧಿಕಾರಿಗಳು ಹಾಗೂ ನೆರೆಯ ಪಿಂಪ್ರಿ ಚಿಂಚ್ವಾಡ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿರುವ ಶಿಂದೆ, ಸ್ಥಳಾಂತರ ಕಾರ್ಯಗಳಿಗೆ ನೆರವಾಗುವಂತೆ ಸೇನೆ ಹಾಗೂ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಗೆ (ಎನ್‌ಡಿಆರ್‌ಎಫ್‌) ಮನವಿ ಮಾಡಿದ್ದಾರೆ.

‘ಅಗತ್ಯಬಿದ್ದರೆ ಜನರನ್ನು ವಾಯು ಮಾರ್ಗವಾಗಿ ಸ್ಥಳಾಂತರಿಸುವಂತೆ ಅಧಿಕಾರಿಗಳಿಗೆ ತಿಳಿಸಿದ್ದೇವೆ. ಚಿಂತಿಸುವ ಅಗತ್ಯವಿಲ್ಲ’ ಎಂದು ಶಿಂದೆ ಹೇಳಿದ್ದಾರೆ.


Spread the love

About Laxminews 24x7

Check Also

ಡಿಸಿ ಮುಂದೆ ಅಳಲು ತೋಡಿಕೊಂಡ ನಿರಾಶ್ರಿತರು

Spread the loveಬೆಳಗಾವಿ: ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಘಟಪ್ರಭಾ ನದಿ ಉಕ್ಕಿ ಹರಿಯುತ್ತಿದೆ. ಇದರ ಪರಿಣಾಮ ಗೋಕಾಕ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ