Breaking News

ಚಿಕ್ಕೋಡಿ: ಯಕ್ಸಂಬಾ-ದತ್ತವಾಡ ಸೇತುವೆ ಮುಳುಗಡೆ

Spread the love

ಚಿಕ್ಕೋಡಿ: ಮಹಾರಾಷ್ಟ್ರದ ಪಶ್ಚಿಮ ಘಟ್ಟ ಪ್ರದೇಶದ ಕಾಳಮ್ಮವಾಡಿ, ರಾಧಾನಗರಿ, ಮಹಾಬಳೇಶ್ವರ, ಕೊಯ್ನಾ ಮುಂತಾದ ಕಡೆಗೆ ಕೃಷ್ಣಾ ಹಾಗೂ ಉಪನದಿಗಳ ಜಲಾನಯನ ಪ್ರದೇಶದಲ್ಲಿ ಮಳೆ ಮುಂದುವರೆದಿದ್ದು, ಚಿಕ್ಕೋಡಿ ಉಪ ವಿಭಾಗ ವ್ಯಾಪ್ತಿಯಲ್ಲೂ ಜಿಟಿ ಜಿಟಿ ಮಳೆಯು ಸುರಿಯುತ್ತಲೇ ಇದೆ.

ಚಿಕ್ಕೋಡಿ: ಯಕ್ಸಂಬಾ-ದತ್ತವಾಡ ಸೇತುವೆ ಮುಳುಗಡೆ
ಹೀಗಾಗಿ ಉಪ ವಿಭಾಗ ವ್ಯಾಪ್ತಿಯಲ್ಲಿ ಈಗಾಗಲೇ ವೇದಗಂಗಾ ನದಿಯ 4, ದೂಧಗಂಗಾ ನದಿಯ 4, ಕೃಷ್ಣಾ ನದಿಯ 1 ಸೇತುವೆ ಜಲಾವೃತಗೊಂಡಿವೆ. ಗುರುವಾರ ಬೆಳಿಗ್ಗೆ ಚಿಕ್ಕೋಡಿ ತಾಲ್ಲೂಕಿನಲ್ಲಿ ದೂಧಗಂಗಾ ನದಿಗೆ ಅಡ್ಡಲಾಗಿರುವ ಯಕ್ಸಂಬಾ-ದತ್ತವಾಡ ಬೃಹತ್ ಸೇತುವೆ ಮುಳುಗಡೆಯಾಗಿ ಚಿಕ್ಕೋಡಿ ಉಪ ವಿಭಾಗದಲ್ಲಿ ಜಲಾವೃತಗೊಂಡ ಸೇತುವೆಗಳ ಸಂಖ್ಯೆ 10ಕ್ಕೆ ಏರಿದಂತಾಗಿದೆ.


Spread the love

About Laxminews 24x7

Check Also

ಗೋಕಾಕ ನಗರದ ನ್ಯೂ ಇಂಗ್ಲಿಷ್ ಶಾಲೆಯ ಮೈದಾನದಲ್ಲಿ ಇಂದು ಕರ್ನಾಟಕ ರಕ್ಷಣಾ ವೇದಿಕೆ ಗೋಕಾಕ‌ ಘಟಕ ಮತ್ತು ಕರವೇ ಸಾಂಸ್ಕೃತಿಕ ಘಟಕದ ವತಿಯಿಂದ ರಾಜ್ಯೋತ್ಸವ ಸಂಭ್ರಮದ ನಿಮಿತ್ತವಾಗಿ ಹಾಸ್ಯ ರಸಮಂಜರಿ ಕಾರ್ಯಕ್ರಮ

Spread the love ಗೋಕಾಕ ನಗರದ ನ್ಯೂ ಇಂಗ್ಲಿಷ್ ಶಾಲೆಯ ಮೈದಾನದಲ್ಲಿ ಇಂದು ಕರ್ನಾಟಕ ರಕ್ಷಣಾ ವೇದಿಕೆ ಗೋಕಾಕ‌ ಘಟಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ