Breaking News

1200 ರೈತರ ಆತ್ಮಹತ್ಯೆ: ಕಾಂಗ್ರೆಸ್ ಆಡಳಿತದಲ್ಲಿ ರೈತರ ಜೀವಕ್ಕಿಲ್ಲ ಬೆಲೆ- ಪ್ರಹ್ಲಾದ್ ಜೋಶಿ

Spread the love

ಬೆಂಗಳೂರು ಜುಲೈ 26: ರಾಜ್ಯದಲ್ಲಿ ಕಳೆದ 15 ತಿಂಗಳಲ್ಲಿ 1200ಕ್ಕೂ ಹೆಚ್ಚು ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಕಾಂಗ್ರೆಸ್ ಸರ್ಕಾರದಲ್ಲಿ ರೈತರ ಜೀವಕ್ಕೆ ಬೆಲೆ ಇಲ್ಲ. ಇದೊಂದು ದೊಡ್ಡ ದುರಂತ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಬೇಸರ ವ್ಯಕ್ತಪಡಿಸಿದ್ದಾರೆ.

Farmers Suicide: 1200 ರೈತರ ಆತ್ಮಹತ್ಯೆ: ಕಾಂಗ್ರೆಸ್ ಆಡಳಿತದಲ್ಲಿ ರೈತರ ಜೀವಕ್ಕಿಲ್ಲ ಬೆಲೆ- ಪ್ರಹ್ಲಾದ್ ಜೋಶಿ

ರಾಜ್ಯದಲ್ಲಿ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಬಗ್ಗೆ ಆತಂಕ ವ್ಯಕ್ತಪಡಿಸಿದ ಪ್ರಹ್ಲಾದ್ ಜೋಶಿ ಅವರು, ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶಗೊಂಡಿದ್ದಾರೆ. ರೈತರಿಗೆ ರಾಜ್ಯದಲ್ಲಿ ಉಜ್ವಲ ಭವಿಷ್ಯ ಇಲ್ಲದಂತಾಗಿದೆ. ಸರ್ಕಾರ ರೈತರ ಆತ್ಮಹತ್ಯೆ ಪ್ರಕರಣಗಳನ್ನು ಕಡೆಗಣಿಸುತ್ತಿದೆ ಎಂದು ಅವರು ದೂರಿದ್ದಾರೆ.

ಸರ್ಕಾರ ರೈತರ ಸಮಸ್ಯೆಗಳಿಗೆ ಕಿವಿಗೊಡುತ್ತಿಲ್ಲ. ಅವರ ಸಂಕಷ್ಟಗಳಿಗೆ ಸ್ಪಂದಿಸುತ್ತಿಲ್ಲ. ಇದು ರಾಜ್ಯದಲ್ಲಿ ರೈತರ ಸಾವಿಗೆ ಕಾರಣವಾಗಿದೆ ಎಂದು ಪ್ರಹ್ಲಾದ್ ಜೋಶಿ ಅವರು ಆರೋಪಿಸಿದ್ದಾರೆ. ರಾಜ್ಯದ ರೈತರಿಗೆ ಬೆಳೆಹಾನಿ ಪರಿಹಾರದ ಅಗತ್ಯವಿದೆ. ರೈತರ ಸಮಸ್ಯೆಗಳ ಕುರಿತು ಮುಖ್ಯಮಂತ್ರಿ ಅವರಿಗೆ ನೀಡಿದ ಮನವಿ ಪತ್ರ ಕಸದ ಬುಟ್ಟಿ ಸೇರಿದೆ ಎಂದು ಪ್ರಹ್ಲಾದ್ ಜೋಶಿ ಕಿಡಿ ಕಾರಿದ್ದಾರೆ.


Spread the love

About Laxminews 24x7

Check Also

ರಾಜ್ಯದಲ್ಲಿರುವ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಆಪರೇಷನ್ ಆರಂಭ

Spread the loveಬೆಂಗಳೂರು: ಬಾಂಗ್ಲಾ ದೇಶೀಯರು ಸೇರಿದಂತೆ ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರು ವವರನ್ನು ಪತ್ತೆ ಹಚ್ಚಿ, ಗಡೀಪಾರು ಮಾಡುವ ಕಾರ್ಯಾಚರಣೆಯನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ