ಶಿವಮೊಗ್ಗ: ಗಾಜನೂರಿನ ತು೦ಗಾ ಜಲಾಶಯಕ್ಕೆ 70 ಸಾವಿರ ಕ್ಯೂಸೆಕ್ ಗಿಂತಲೂ ಅಧಿಕ ನೀರು ಬರುತ್ತಿದ್ದು ಅಷ್ಟೇ ಪ್ರಮಾಣದ ನೀರು ನದಿಗೆ ಬಿಡಲಾಗುತ್ತಿರುವುದರಿಂದ ಈ ಭಾಗದ ರಸ್ತೆಗಳು ಜಲಾವೃತವಾಗುತ್ತದೆ. ಇದರಿಂದ ಗದ್ದೆ ತೋಟಗಳು ಮುಳುಗಿ ತುಂಬಾ ನಷ್ಠವಾಗುತ್ತಿದೆ.
ಪ್ರತಿ ವರ್ಷದ ಮಳೆಗಾಲದಲ್ಲಿ ಈ ಪರಿಸ್ಥಿತಿ ಉಂಟಾಗುತ್ತಿದ್ದು ಇದಕ್ಕೊಂದು ಶಾಶ್ವತ ಪರಿಹಾರವನ್ನು ಸರ್ಕಾರ ಕೈಗೊಳ್ಳಬೇಕಿದೆ ಎಂಬುದು ಈ ಭಾಗದ ರೈತರ, ಗ್ರಾಮಸ್ಥರ ಮತ್ತು ಭಕ್ತರ ಆಗ್ರಹವಾಗಿದೆ.
ಭದ್ರಾ ಜಲಾಶಯದ ಗರಿಷ್ಠ ಮಟ್ಟ 186 ಅಡಿಗಳಿದ್ದು ಶನಿವಾರ 178 ಅಡಿಗಳಿಗೆ ತಲುಪಿದೆ. ಗರಿಷ್ಠ ಮಟ್ಟ ತಲುಪಲು ಇನ್ನು ಕೇವಲ 8 ಅಡಿ ನೀರು ಬರಬೇಕಿದೆ.
ಜಲಾಶಯಕ್ಕೆ ಪ್ರಸ್ತುತ 50 ಸಾವಿರ ಕ್ಯೂಸೆಕ್ ನೀರು ಬರುತ್ತಿದ್ದು ಜಲಾಶಯದ ಹಿತದೃಷ್ಟಿಯಿಂದ ಯಾವ ಸಮಯದಲ್ಲಾದರೂ ನದಿಗೆ ನೀರನ್ನು ಹರಿಸುವ ಸಾಧ್ಯತೆ ಇದ್ದು ನದಿಪಾತ್ರದ ಜನರು ಸುರಕ್ಷಿತ ಸ್ಥಳಗಳಿಗೆ ತೆರಳುವ೦ತೆ ಭದ್ರ ಅಧೀಕ್ಷಕ ಇಂಜನಿಯರ್ ಸುಜಾತ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.