Breaking News

ನವಿಲುತೀರ್ಥ ಭರ್ತಿಗೆ ಕಾಲ ಸನ್ನಿಹಿತ

Spread the love

ವದತ್ತಿ: ಪಶ್ಚಿಮ ಘಟ್ಟದಲ್ಲಿ ಸುರಿದ ಭಾರೀ ಮಳೆಯಿಂದ ಮಲಪ್ರಭಾ ನದಿಯ ಒಳಹರಿವು ಗಣನೀಯ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ. ನವಿಲುತೀರ್ಥ (ಇಂದಿರಾ) ಅಣೆಕಟ್ಟು 10ನೇ ಬಾರಿ ಭರ್ತಿಯಾಗುವ ಕಾಲ ಸನ್ನಿಹಿತವಾಗಿದೆ. ಇದರಿಂದ ಆಣೆಕಟ್ಟೆ ಕೆಳಭಾಗದ ಮತ್ತು ನದಿ ಪಾತ್ರದ ಜನತೆಗೆ ಈಗಾಗಲೇ ಮುನ್ನೆಚ್ಚರಿಕೆ ನೀಡಲಾಗಿದೆ.

ಸವದತ್ತಿ: ನವಿಲುತೀರ್ಥ ಭರ್ತಿಗೆ ಕಾಲ ಸನ್ನಿಹಿತ

ನವಿಲುತೀರ್ಥ ಅಣೆಕಟ್ಟೆ ಗರಿಷ್ಠ ಮಟ್ಟ 2079.50 ಅಡಿ. ಇದೀಗ 2069.60 ಅಡಿ ನೀರು ಸಂಗ್ರಹವಾಗಿದೆ. ಸದ್ಯ 21 ಸಾವಿರ ಕ್ಯುಸೆಕ್‌ಗೂ ಅಧಿಕ ಒಳಹರಿವಿದೆ. 10 ಸಾವಿರ ಕ್ಯುಸೆಕ್‌ನಷ್ಟು ನೀರನ್ನು ಶನಿವಾರದಿಂದ ಹೊರಬಿಡಲಾಗುತ್ತಿದೆ. ಮುನವಳ್ಳಿ, ತೆಗ್ಗೀಹಾಳ, ರಾಮದುರ್ಗ ಸೇರಿ ಜಲಾಶಯದ ಕೆಳಭಾಗದ ಗ್ರಾಮಗಳಿಗೆ ಎಚ್ಚರಿಕೆ ವಹಿಸಲು ತಾಲ್ಲೂಕು ಆಡಳಿತ ಸೂಚಿಸಿದೆ.

2019ರಲ್ಲಿ ಮಲಪ್ರಭೆ ಉಕ್ಕಿ ಹರಿದು ಪ್ರವಾಹ ಸೃಷ್ಟಿಯಾಗಿತ್ತು. ಆರಂಭದಲ್ಲಿ 28 ಸಾವಿರ ಕ್ಯುಸೆಕ್‌ನಷ್ಟು ಇದ್ದ ಒಳಹರಿಸುವ ಕೆಲವೇ ದಿನಗಳಲ್ಲಿ 1.10 ಲಕ್ಷ ಕ್ಯುಸೆಕ್‌ಗೆ ಏರಿತ್ತು. ಇಷ್ಟೇ ಪ್ರಮಾಣದ ನೀರನ್ನು ಹೊರಬಿಡಲಾಗದೇ ಪ್ರವಾಹ ಪರಿಸ್ಥಿತಿ ತಲೆದೋರಿತ್ತು. ಅಣೆಕಟ್ಟೆಯ ಸುರಕ್ಷತೆ ಹಾಗೂ ಜಲಾನಯನ ‍ಪ್ರದೇಶಗಳ ಜನರ ಸುರಕ್ಷತೆಗೆ ಜಿಲ್ಲಾಡಳಿತ ಇನ್ನಿಲ್ಲದ ಕಸರತ್ತು ನಡೆಸಿತ್ತು. ಈ ಬಾರಿ ಮತ್ತೆ ಅಂಥದ್ದೇ ಮಳೆಗಾಲ ಮರಳಿದೆ. ಹೀಗಾಗಿ, ಪ್ರವಾಹ ಬಂದರೂ ಅಚ್ಚರಿಪಡಬೇಕಿಲ್ಲ.

ತಹಶೀಲ್ದಾರ್ ಎಂ.ಎನ್. ಹೆಗ್ಗನವರ ಮತ್ತು ತಾಲ್ಲೂಕು ನೋಡಲ್ ಅಧಿಕಾರಿ ಮಹಾಂತೇಶ ಮುರಗೋಡ ಪರಿಸ್ಥಿತಿಯ ಅವಲೋಕನ ನಡೆಸಿದ್ದಾರೆ.


Spread the love

About Laxminews 24x7

Check Also

ಪಿಜಿ-ನೀಟ್ ದೇಶಕ್ಕೆ 9ನೇ RANK ಗಳಿಸಿದDr.ಶರಣಪ್ಪ

Spread the loveಪಿಜಿ-ನೀಟ್ ದೇಶಕ್ಕೆ 9ನೇ ರ‌್ಯಾಂಕ್ ಗಳಿಸಿದ ಡಾ.ಶರಣಪ್ಪ ಬಿಮ್ಸ್ ಮುಕುಟಕ್ಕೆ ಮತ್ತೊಂದು ಗರಿ ಬೆಳಗಾವಿ ವೈದ್ಯಕೀಯ ವಿಜ್ಞಾನಗಳ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ