Breaking News
Home / ಜಿಲ್ಲೆ / ಬೆಂಗಳೂರು / ರಾಜ್ಯದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಾಮಗಾರಿ ನಡೆಸುತ್ತಿರುವ ಗುತ್ತಿಗೆದಾರರು ಸ್ಪರ್ಧಿಸುವಂತಿಲ್ಲ.

ರಾಜ್ಯದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಾಮಗಾರಿ ನಡೆಸುತ್ತಿರುವ ಗುತ್ತಿಗೆದಾರರು ಸ್ಪರ್ಧಿಸುವಂತಿಲ್ಲ.

Spread the love

ಬೆಂಗಳೂರು: ರಾಜ್ಯದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆಗೆ  ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಾಮಗಾರಿ ನಡೆಸುತ್ತಿರುವ ಗುತ್ತಿಗೆದಾರರು ಸ್ಪರ್ಧಿಸುವಂತಿಲ್ಲ.
ಈ ಕುರಿತು ಚುನಾವಣೆ ಆಯೋಗ ಸ್ಪಷ್ಟನೆ ನೀಡಿದೆ. ಆ ಪಂಚಾಯಿತಿ ವ್ಯಾಪ್ತಿಯಲ್ಲಿ ಗುತ್ತಿಗೆ ಕಾಮಗಾರಿ ನಿರ್ವಹಿಸುವವರ ಸ್ಪರ್ಧೆ ಮಾಡುವಂತಿಲ್ಲ ಎಂದು ತಿಳಿಸಿದೆ.
ಸರ್ಕಾರಿ ನೌಕರಿಯಲ್ಲಿರುವವರ ಪತಿ ಅಥವಾ ಪತ್ನಿ ಚುನಾವಣೆಗೆ ಸ್ಪರ್ಧಿಸಬಹುದು ಎಂದೂ ತಿಳಿಸಿದೆ.
ಅಭ್ಯರ್ಥಿ ಅದೇ ಪಂಚಾಯಿತಿಗೆ ಸೇರಿದವನಾಗಿರಬೇಕು. ಮೀಸಲು ಸ್ಥಾನಕ್ಕೆ ಜಾತಿ ಪ್ರಮಾಣ ಪತ್ರ ನೀಡಬೇಕು. ಸಾಮಾನ್ಯ ವರ್ಗಕ್ಕೆ 200ರೂ. ಮೀಸಲಾತಿ ವರ್ಗಕ್ಕೆ 100ರೂ.ಗಳ ಠೇವಣಿ ನಿಗದಿಪಡಿಸಿದೆ.
 ಅಭ್ಯರ್ಥಿ 21 ವರ್ಷದವನಾಗಿರಬೇಕು ಹಾಗೂ ಒಂದು ಕ್ಷೇತ್ರಕ್ಕೆ 4 ನಾಮಪತ್ರ ಸಲ್ಲಿಸಬಹುದು.
ನಾಮಪತ್ರ ವಾಪಸ್ ಪಡೆಯಲು ಸೂಚಕರ ಅಥವಾ ಏಜೆಂಟರ ಮೂಲಕ ಬಂದರೆ ಮಾತ್ರ ಹಿಂತೆಗೆದುಕೊಳ್ಳಲು ಅವಕಾಶವಿದೆ. ಈ ಕುರಿತು ಚುನಾವಣಾ ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿಗೆ ಸೂಚನೆ ನೀಡಿದೆ ಎಂದು ಆಯೋಗ ಸ್ಪಷ್ಟಪಡಿಸಿದೆ.

Spread the love

About Laxminews 24x7

Check Also

ಚಿದಾನಂದ ಸವದಿ‌ಗೆ ಚಿಕ್ಕೋಡಿ ಕ್ಷೇತ್ರಕ್ಕೆ ಟಿಕೆಟ್ ನೀಡುವ ಸಾಧ್ಯತೆ

Spread the loveಬೆಳಗಾವಿ, : ಲೋಕಸಭಾ ಚುನಾವಣೆ (Lok Sabha Elections )ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ (Congress) ಎಚ್ಚರಿಕೆಯಿಂದ ಹೆಜ್ಜೆ ಇಡುತ್ತಿದೆ. ಅಳೆದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ