ಯಡೂರ ವೀರಭದ್ರೇಶ್ವರ ದೇವಸ್ಥಾನ ಜಲಾವೃತ

Spread the love

ಚಿಕ್ಕೋಡಿ: ಮಹಾರಾಷ್ಟ್ರದ ಕೊಂಕಣ ಪ್ರದೇಶದಲ್ಲಿ ಕಳೆದ 15 ದಿನಗಳಿಂದ ಭಾರಿ ಪ್ರಮಾಣದಲ್ಲಿ ಮಳೆ ಬೀಳುತ್ತಿರುವ ಪರಿಣಾಮವಾಗಿ ಕೃಷ್ಣಾ ನದಿಗೆ 2 ಲಕ್ಷ 75 ಸಾವಿರ ಕ್ಯುಸೆಕ್‌ಗೂ ಹೆಚ್ಚು ನೀರು ಹರಿದು ಬರುತ್ತಿದೆ. ಹೀಗಾಗಿ ಕೃಷ್ಣಾ ನದಿ ತೀರದಲ್ಲಿರುವ ಚಿಕ್ಕೋಡಿ ತಾಲ್ಲೂಕಿನ ಯಡೂರು ಗ್ರಾಮದ ಪೌರಾಣಿಕ ಹಿನ್ನೆಲೆಯ ವೀರಭದ್ರೇಶ್ವರ ದೇವಸ್ಥಾನದ ಗರ್ಭಗುಡಿ ಸಂಪೂರ್ಣ ಜಲಾವೃತಗೊಂಡಿದೆ.

ಚಿಕ್ಕೋಡಿ | ಭಾರಿ ಮಳೆ: ಯಡೂರ ವೀರಭದ್ರೇಶ್ವರ ದೇವಸ್ಥಾನ ಜಲಾವೃತ

ಶನಿವಾರ ತಡರಾತ್ರಿ ದೇವಸ್ಥಾನದ ದಕ್ಷಿಣ ದ್ವಾರದಿಂದ ಕೃಷ್ಣಾ ನದಿ ನೀರು ಗರ್ಭಗುಡಿಯೊಳಗೆ ಪ್ರವೇಶಿಸಿತು. ನದಿ ನೀರು ಗರ್ಭಗುಡಿಯೊಳಗೆ ಪ್ರವೇಶಸುತ್ತಿದ್ದಂತೆಯೇ ವೀರಭದ್ರದೇವರಿಗೆ ಕೃಷ್ಣೆಯ ಜಲಾಭಿಷೇಕವಾಯಿತೆಂದು ಅರ್ಚಕರು ಪೂಜೆ, ಆರತಿ ನೆರವೇರಿಸಿದರು. ಸಕಲ ವಾದ್ಯ ವೈಭವಗಳೊಂದಿಗೆ ಭಕ್ತಿ ಭಾವದಿಂದ ವೀರಭದ್ರೇಶ್ವರ ಹಾಗೂ ಭದ್ರಕಾಳೇಶ್ವರಿ ದೇವರ ಮೂರ್ತಿಗಳನ್ನು ಕಾಡಸಿದ್ದೇಶ್ವರ ಮಠಕ್ಕೆ ತಂದು ಪ್ರತಿಷ್ಠಾಪಿಸಲಾಯಿತು


Spread the love

About Laxminews 24x7

Check Also

ರಾಜ್ಯದಲ್ಲಿರುವ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಆಪರೇಷನ್ ಆರಂಭ

Spread the loveಬೆಂಗಳೂರು: ಬಾಂಗ್ಲಾ ದೇಶೀಯರು ಸೇರಿದಂತೆ ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರು ವವರನ್ನು ಪತ್ತೆ ಹಚ್ಚಿ, ಗಡೀಪಾರು ಮಾಡುವ ಕಾರ್ಯಾಚರಣೆಯನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ