Breaking News

ಲಂಕಾಗೆ ಬಂದಿಳಿದ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ

Spread the love

ಕೊಲಂಬೊ: ಶ್ರೀಲಂಕಾ ವಿರುದ್ದದ ಏಕದಿನ ಸರಣಿಗಾಗಿ ಟೀಂ ಇಂಡಿಯಾ (Team India) ನಾಯಕ ರೋಹಿತ್ ಶರ್ಮಾ (Rohit Sharma), ಹಿರಿಯ ಆಟಗಾರ ವಿರಾಟ್ ಕೊಹ್ಲಿ (Virat Kohli) ಮತ್ತು ಏಕದಿನ ಸರಣಿಗಾಗಿ ಮಾತ್ರ ಆಯ್ಕೆಯಾದ ಆಟಗಾರರು ದ್ವೀಪ ರಾಷ್ಟ್ರಕ್ಕೆ ಬಂದಿಳಿದರು.

 

ಭಾರತೀಯ ನಾಯಕನ ಹೊರತಾಗಿ, ಶ್ರೀಲಂಕಾ ವಿರುದ್ಧದ ಏಕದಿನ ಪಂದ್ಯಗಳಿಗೆ ಪ್ರತ್ಯೇಕವಾಗಿ ಆಯ್ಕೆಯಾದ ಆಟಗಾರರು ಭಾನುವಾರ ರಾತ್ರಿ ಶ್ರೀಲಂಕಾ ರಾಜಧಾನಿಯಲ್ಲಿರುವ ಐಟಿಸಿ ರತ್ನದೀಪ ಹೋಟೆಲ್‌ ತೆರಳಿದರು. ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕುಲದೀಪ್ ಯಾದವ್ ಮತ್ತು ಹರ್ಷಿತ್ ರಾಣಾ ಕೊಲಂಬೊಗೆ ಬಂದಿಳಿದರು.

ಏಕದಿನ ಆಟಗಾರರು ಸೋಮವಾರ ಕ್ರೀಡಾಂಗಣದಲ್ಲಿ ನೆಟ್ ಸೆಷನ್‌ನಲ್ಲಿ ಭಾಗವಹಿಸಿವೆ. ಮುಖ್ಯ ಕೋಚ್ ಗೌತಮ್ ಗಂಭೀರ್ ಅವರ ಸಹಾಯಕ ಕೋಚ್‌ ಅಭಿಷೇಕ್ ನಾಯರ್ ಅವರನ್ನು ಕೊಲಂಬೊದಲ್ಲಿ ನಡೆಯುವ ಅಭ್ಯಾಸದ ಮೇಲ್ವಿಚಾರಣೆ ಮಾಡಲು ನಿಯೋಜಿಸಲಾಗಿದೆ. ಭಾನುವಾರ ರಾತ್ರಿ ನಡೆದ ಎರಡನೇ ಟಿ20 ಪಂದ್ಯದ ಬಳಿಕ ನಾಯರ್ ಸೋಮವಾರ ಬೆಳಗ್ಗೆ ಕೊಲಂಬೊಗೆ ತೆರಳಿದ್ದರು.

ಸದ್ಯ ಟಿ20 ಸರಣಿ ಆಡುತ್ತಿರುವ ಏಕದಿನ ಸರಣಿಯಲ್ಲಿರುವ ಉಳಿದ ಆಟಗಾರರು ಮೂರನೇ ಟಿ20 ಪಂದ್ಯದ ಬಳಿಕ ಕೊಲೊಂಬೊಗೆ ತೆರಳಲಿದ್ದಾರೆ. ಜುಲೈ 30ರಂದು ಮೂರನೇ ಟಿ20 ಪಂದ್ಯ ಪಲ್ಲೆಕೆಲೆಯಲ್ಲಿ ನಡೆಯಲಿದೆ.


Spread the love

About Laxminews 24x7

Check Also

ರಾಜ್ಯದಲ್ಲಿರುವ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಆಪರೇಷನ್ ಆರಂಭ

Spread the loveಬೆಂಗಳೂರು: ಬಾಂಗ್ಲಾ ದೇಶೀಯರು ಸೇರಿದಂತೆ ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರು ವವರನ್ನು ಪತ್ತೆ ಹಚ್ಚಿ, ಗಡೀಪಾರು ಮಾಡುವ ಕಾರ್ಯಾಚರಣೆಯನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ