Breaking News

ಕಂಚು ಗೆದ್ದ ಸ್ವಪ್ನಿಲ್‌ಗೆ ₹1 ಕೋಟಿ ಬಹುಮಾನ ಘೋಷಿಸಿದ ಸಿಎಂ ಶಿಂದೆ

Spread the love

ಮುಂಬೈ: ಪ್ಯಾರಿಸ್‌ ಒಲಿಂ‍‍ಪಿಕ್ಸ್‌ನಲ್ಲಿ ಶೂಟಿಂಗ್‌ ವಿಭಾಗದಲ್ಲಿ ಕಂಚಿನ ಪದಕ ಗೆದ್ದ ಸ್ವಪ್ನಿಲ್‌ ಕುಸಳೆ ಅವರಿಗೆ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂದೆ ₹1 ಕೋಟಿ ಬಹುಮಾನ ಘೋಷಣೆ ಮಾಡಿದ್ದಾರೆ.

ಕುಸಳೆ ಅವರು 50 ಮೀಟರ್‌ ಶೂಟಿಂಗ್‌ ವಿಭಾಗದಲ್ಲಿ ಮೂರನೇ ಸ್ಥಾನ ಪಡೆಯುವ ಮೂಲಕ ಕಂಚಿನ ಪದಕ ಗೆದ್ದಿದ್ದಾರೆ.

Olympics: ಕಂಚು ಗೆದ್ದ ಸ್ವಪ್ನಿಲ್‌ಗೆ ₹1 ಕೋಟಿ ಬಹುಮಾನ ಘೋಷಿಸಿದ ಸಿಎಂ ಶಿಂದೆ

ಈ ಮೂಲಕ ಈ ಬಾರಿಯ ಒಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಮೂರು ಪದಕಗಳು ಒಲಿದಂತಾಗಿದೆ.

ಕುಸಳೆ ಅವರ ತಂದೆ ಮತ್ತು ತರಬೇತುದಾರರೊಂದಿಗೆ ಸಿಎಂ ಮಾತುಕತೆ ನಡೆಸಿದ್ದಾರೆ, ಜತೆಗೆ ಕುಸಳೆ ಅವರಿಗೆ ವಿಡಿಯೊ ಕಾಲ್‌ ಮಾಡಿ ಅಭಿನಂದಿಸಿದ್ದಾರೆ. ‘ಈ ವೇಳೆ ಮಾತನಾಡಿದ ಅವರು, ಕುಸಳೆ ಅವರಿಗೆ ₹1 ಕೋಟಿ ಬಹುಮಾನ ಘೋಷಣೆ ಮಾಡಲಾಗಿದೆ. ಒಲಿಂಪಿಕ್ಸ್‌ನಿಂದ ಆಗಮಿಸಿದ ಬಳಿಕ ಅವರನ್ನು ಅಭಿನಂದಿಸಲಾಗುವುದು’ ಎಂದರು.

‘ಮಹಾರಾಷ್ಟ್ರದ ಕೊಲ್ಹಾಪುರದ ಮೂಲದ ಸ್ವಪ್ನಿಲ್‌ ಕುಸಳೆ ಅವರು ಕ್ರೀಡಾ ಲೋಕದಲ್ಲಿ ಸಾಧನೆ ಮಾಡಿ ದೇಶಕ್ಕೆ ಕೀರ್ತಿ ತಂದಿರುವುದು ಹೆಮ್ಮೆಯ ಸಂಗತಿ’ ಎಂದು ಹೇಳಿದರು


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ