Breaking News

ವಿವಸ್ತಗೊಳಿಸಿ ಅಮಾನುಷ ಹಲ್ಲೆ: ಐವರು ಮಂಗಳಮುಖಿಯರ ಬಂಧನ

Spread the love

ವಿಜಯಪುರ : ಹೆಣ್ಣಾಗಿ ಜನಿಸಿ ಗಂಡಾಡಿ ಪರಿವರ್ತನೆಗೊಂಡಿದ್ದ ವ್ಯಕ್ತಿಯನ್ನು ಹಾಡುಹಗಲೆ ವಿವಸ್ತ್ರಗೊಳಿಸಿ, ಮರ್ಮಾಂಗಕ್ಕೆ ಖಾರದ ಪುಡಿ ಎರಚಿ ಹಲ್ಲೆ ಮಾಡಿದ್ದಕ್ಕಾಗಿ ಪ್ರಕಕರಣ ದಾಖಲಿಸಿಕೊಂಡಿರುವ ಪೊಲೀಸರು ಐವರು ಮಂಗಳಮುಖಿಯರನ್ನು ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ವಿಡಿಯೋ ವೈರಲ್ ಆಗಿತ್ತು.

Transgender; ವಿವಸ್ತಗೊಳಿಸಿ ಅಮಾನುಷ ಹಲ್ಲೆ: ಐವರು ಮಂಗಳಮುಖಿಯರ ಬಂಧನ

ಇದರಿಂದ ಎಚ್ಚತ್ತ ಪೊಲೀಸರು ಬಾಧಿತನಿಂದ ದೂರು ಪಡೆದು, ಕೃತ್ಯ ನಡೆಸಿದ ಐವರು ಮಂಗಳಮುಖಿಯರ ವಿರುದ್ಧ ದೂರು ದಾಖಲಿಸಿಕೊಂಡು, ಬಂಧಿಸಿದ್ದಾರೆ. ಇದೀಗ ಇಡೀ ಪ್ರಕರಣ ‘ನಾನವಳಲ್ಲ’ ಎಂಬ ಕಥೆಗೆ ತಿರುಗಿದೆ.

ನಗರದ ಬಸ್ ನಿಲ್ದಾಣದ ಪರಿಸರದಲ್ಲಿ ಜೂನ್ 21 ರಂದು ಮುಂಗಳಮುಖಿಯರ ಗುಂಪು ಪ್ಯಾಂಟ್ ಧರಿಸಿದ್ದ ಹೆಣ್ಣಿನ ರೂಪದಲ್ಲಿದ್ದ ಓರ್ವ ವ್ಯಕ್ತಿಯ ಮೇಲೆ ದಾಳಿ ನಡೆಸಿ ಸಂಪೂರ್ಣ ವಿವಸ್ತ್ರಗೊಳಿಸಿ, ಗುಪ್ತಾಂಗಕ್ಕೆ ಖಾರದ ಪುಡಿ ಎರಚಿ ಹಲ್ಲೆ ನಡೆಸಿದ್ದರು.

ಸದರಿ ಘಟನೆಯ ಕುರಿತು ಸಾರ್ವಜನಿಕರು ಮಾಡಿಕೊಂಡಿದ್ದ ವಿಡಿಯೋ ವೈರಲ್ ಆಗಿತ್ತು. ಇದರ ಬೆನ್ನಲ್ಲೇ ಉದಯವಾಣಿ ವರದಿ ಪ್ರಕಟಿಸಿತ್ತು.

ಇದರಿಂದ ಎಚ್ಚೆತ್ತ ಪೊಲೀಸರು ಘಟನೆಗೆ ಸಂಬಂಧಿಸಿದಂತೆ ಬಾಧಿತ ರೇಖಾರೆಡ್ಡಿ ಉರ್ಫ ಸಚಿನ್ ರೆಡ್ಡಿ ಎಂಬ ಲಿಂಗ ಪರಿವರ್ತಿತನಿಂದ ಗೋಲಗುಂಬಜ ಠಾಣೆ ಪೊಲೀಸರು ದೂರು ಪಡೆದು, ಪ್ರಕರಣ ದಾಖಲಿಸಿದ್ದಾರೆ.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ