Breaking News

ಹೊಟ್ಟೆ ತುಂಬಿಸದ ಕಾಳಜಿ‌ ಕೇಂದ್ರ. ಸಂತ್ರಸ್ಥರೇ ತಯಾರಿಸುತ್ತಿದ್ದಾರೆ ಅಡುಗೆ

Spread the love

ಮುಧೋಳ: ಘಟಪ್ರಭಾ ಪ್ರವಾಹಕ್ಕೆ ಸಿಲುಕಿರುವ ಸಂತ್ರಸ್ಥರಿಗೆ ನೆರವಾಗಬೇಕಿದ್ದ ಕಾಳಜಿ ಕೇಂದ್ರಗಳು ಸಂತ್ರಸ್ಥರ ಹೊಟ್ಟೆ ತುಂಬಿಸುತ್ತಿಲ್ಲ. ಅರೆಹೊಟ್ಟೆ ಊಟ ತಡೆಯದೆ ಸಂತ್ರಸ್ಥರು ಕಾಳಜಿ ಕೇಂದ್ರದಲ್ಲಿಯೇ ಗ್ಯಾಸ್ ಬಳಕೆ ಮಾಡಿ ಹಚ್ಚಿ‌ನ ಆಹಾರ ತಯಾರಿಸುತ್ತಿದ್ದಾರೆ.

ಮುಧೋಳ ತಾಲೂಕಿನ ಮಿರ್ಜಿ ಗ್ರಾಮದಲ್ಲಿ ಆರಂಭಿಸಿರುವ ಬಿ.ಬಿ. ಮುಧೋಳ ಶಾಲೆಯಲ್ಲಿನ ಸಂತ್ರಸ್ಥರು ತಮ್ಮ ಅಗತ್ಯ ಅಡುಗೆಗಾಗಿ ಕಾಳಜಿ‌ ಕೇಂದ್ರದಲ್ಲಿಯೇ ಗ್ಯಾಸ್ ಒಲೆ ವ್ಯವಸ್ಥೆ ಮಾಡಿಕೊಂಡಿದ್ದಾರೆ.

ಎರಡು ಚಪಾತಿ ಸಾಲಲ್ಲ : ಹಳ್ಳಿಗಾಡಿನ ರೈತಾಪಿ ವರ್ಗಕ್ಕೆ ಹೊಟ್ಟೆ ತುಂಬಾ ರೊಟ್ಟಿ ತಿಂದಾಗ ಮಾತ್ರ ರಟ್ಟಿ‌ಗಟ್ಟಿಯಾಗುತ್ತದೆ. ಆದರೆ ಸದ್ಯ ಕಾಳಜಿ‌ ಕೇಂದ್ರದಲ್ಲಿ ಉದಯವಾಣಿ ತಂಡ ರಿಯಾಲಿಟಿ ಚೆಕ್ ಗಾಗಿ ತೆರಳಿದಾಗ ಕೇವಲ ಎರಡು ಚಪಾತಿ ನೀಡುತ್ತದ್ದಾರೆ ಎಂಬ ಸಂತ್ರಸ್ಥರು ಅಸಾಹಯಕತೆಯ ಮಾತುಗಳು ಕೇಳಿಬಂದವು.

ಎರಡು ಚಾಪತಿಯೊಂದಿಗೆ ಹೊಟ್ಟೆ ತುಂಬಾ ಅನ್ನ ನೀಡುತ್ತಾರೆ ಆದರೆ ನಮಗೆ ಅನ್ನ ಒಗ್ಗಲ್ಲ. ಕೃಷಿ ಕಾರ್ಯದಲ್ಲಿ ತೊಡಗುವುದರಿಂದ ಮತ್ತೆ ಹಸಿವಾಗುತ್ತದೆ‌. ಅದಕ್ಕೆ ಗ್ಯಾಸ್ ನಲ್ಲಿ ನಮಗೆ ನೇಕಾದ ಆಹಾರ ತಯಾರಿಸಿಕೊಳ್ಳುತ್ತೇವೆ ಎನ್ನುತ್ತಾರೆ ಸಂತ್ರಸ್ಥರು.

ಬೆಳಗ್ಗೆ ಉಪಹಾರ, ಮಧ್ಯಾಹ್ನ ಎರಡು ಚಪಾತಿ ಅನ್ನ ಸಾಂಬರ್ ನೀಡುತ್ತಿದ್ದಾರೆ ಸಂಜೆಯೂ ಅದೇ ರೀತಿಯ ಆಹಾರ ಕೊಡುತ್ತಾರೆ. ಹೊಲಮನೆಯಲ್ಲಿ‌ ಕೃಷಿ‌ಕಾರ್ಯ ಮಾಡುವ ನಮಗೆ ಇಲ್ಲಿನ ಆಹಾರ ಹೊಟ್ಟೆ ತುಂಬಿಸುತ್ತಿಲ್ಲ ಆದ್ದರಿಂದ ನಮಗೆ ನೀಡಿರುವ ಕೊಠಡಿಯಲ್ಲಿಯೇ ಗ್ಯಾಸ್ ನಿಂದ ನಮಗೆ ಬೇಕಾದ ಹೆಚ್ಚಿನ ಆಹಾರ ತಯಾರಿಸಿಕೊಳ್ಳುತ್ತೇವೆ ಎಂದು ಧೈರ್ಯದಿಂದ ನುಡಿಯುತ್ತಾರೆ ಸಂತ್ರಸ್ಥರು.


Spread the love

About Laxminews 24x7

Check Also

ಬರಗೂರು ರಾಮಚಂದ್ರಪ್ಪನವರ ವ್ಯಕ್ತಿತ್ವ ಎಲ್ಲರಿಗೂ ಮಾದರಿ; ಎಸ್.ಐ. ಬಿರಾದಾರ

Spread the love ಬರಗೂರು ರಾಮಚಂದ್ರಪ್ಪನವರ ವ್ಯಕ್ತಿತ್ವ ಎಲ್ಲರಿಗೂ ಮಾದರಿ; ಎಸ್.ಐ. ಬಿರಾದಾರ ಬಸವರಾಜ ಕಟ್ಟಿಮನಿ ಕಾದಂಬರಿ ಪ್ರಶಸ್ತಿ ಪ್ರದಾನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ