Breaking News

ಚಿತ್ರದುರ್ಗಕ್ಕೆ ನಟ ಧ್ರುವ ಸರ್ಜಾ ಭೇಟಿ

Spread the love

ಚಿತ್ರದುರ್ಗ, ಆಗಸ್ಟ್‌ 03: ಚಿತ್ರದುರ್ಗ ನಗರದ ಹೊರವಲಯದಲ್ಲಿರುವ ಮುರುಘಾ ಮಠಕ್ಕೆ ನಟ ಧ್ರುವ ಸರ್ಜಾ ಭೇಟಿ ನೀಡಿ, ಮುರುಘಾ ಶರಣರ ಗದ್ದುಗೆಯ ದರ್ಶನ ಪಡೆದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ‘ಮುರುಘಾ ಮಠಕ್ಕೆ ಭೇಟಿ ಕೊಟ್ಟು, ಶ್ರೀಗಳ ಗದ್ದೆಗೆಯ ಆಶೀರ್ವಾದ ಪಡೆದಿದ್ದೇನೆ.

ಚಿತ್ರದುರ್ಗಕ್ಕೆ ನಟ ಧ್ರುವ ಸರ್ಜಾ ಭೇಟಿ: ನೆಚ್ಚಿನ ನಟನ ಕಾಣಲು ಮುಗಿಬಿದ್ದ ಅಭಿಮಾನಿಗಳು

ಮುಂಬೈನಲ್ಲಿ ಮಾರ್ಟಿನ್ ಸಿನಿಮಾದ ಟೈಲರ್ ಲಾಂಚ್ ಮಾಡಲಾಗುತ್ತಿದೆ. ಈ ಬಗ್ಗೆ ಮುಂಬೈನಲ್ಲಿ ಸುದ್ದಿಗೋಷ್ಠಿ ನಡೆಸುತ್ತೇವೆ. ಅಂತರಾಷ್ಟ್ರೀಯ ಪತ್ರಕರ್ತರು ಸುದ್ದಿಗೋಷ್ಠಿಯಲ್ಲಿ ಭಾಗಿಯಾಗಲಿದ್ದಾರೆ’ ಎಂದರು.

‘ಇನ್ನು ಮುಂಬೈಗೆ ಹೋಗುವ ಮಾರ್ಗ ಮಧ್ಯೆ ಎಲ್ಲಾ ಜಿಲ್ಲೆಗಳಿಗೆ ಭೇಟಿ ನೀಡುತ್ತಿದ್ದೇನೆ. ಎಲ್ಲರೂ ಮಾರ್ಟಿನ್ ಸಿನಿಮಾ ನೋಡಿ ಹರಸಿ’ ಎಂದು ಧ್ರುವ ಸರ್ಜಾ ಅಭಿಮಾನಿಗಳಲ್ಲಿ ಮನವಿ ಮಾಡಿದರು. ನಟ ಧ್ರುವ ಸರ್ಜಾ ಅವರನ್ನು ನೋಡಲು ಅಭಿಮಾನಿಗಳು ಮುಗಿಬಿದ್ದರು. ನೆಚ್ಚಿನ ನಟನನ್ನು ನೋಡಿ ಮಾತನಾಡಿಸಿ ಶಿಳ್ಳೆ, ಚಪ್ಪಾಳೆ, ಕೇಕೆ ಹಾಕಿ ಖುಷಿ ಪಟ್ಟರು. ನಟ ಧ್ರುವ ಸರ್ಜಾ ಆಗಮನ ಹಿನ್ನೆಲೆಯಲ್ಲಿ ಮುರುಘಾ ಮಠದಲ್ಲಿ ಬಿಗಿ ಬಂದೋಬಸ್ ವ್ಯವಸ್ಥೆ ಕಲ್ಪಿಸಲಾಗಿತ್ತು.


Spread the love

About Laxminews 24x7

Check Also

ಶಿವಮೊಗ್ಗ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಇಲ್ಲಿನ ತಾಲೂಕು ಆಡಳಿತಗಳು ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿವೆ.

Spread the loveಶಿವಮೊಗ್ಗ/ಉತ್ತರಕನ್ನಡ: ರಾಜ್ಯದ ಮಲೆನಾಡು ಭಾಗದ ಹಲವೆಡೆ ಮತ್ತೆ ಮಳೆಯ ಆರ್ಭಟ ಮುಂದುವರೆದಿದೆ. ಭಾರಿ ವರ್ಷಧಾರೆ ಹಿನ್ನೆಲೆಯಲ್ಲಿ ಶಿವಮೊಗ್ಗ ಹಾಗೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ