Breaking News

ಯಡಿಯೂರಪ್ಪ ತಟ್ಟೆಯಲ್ಲಿ ಕತ್ತೆ ಸತ್ತು ಬಿದ್ದಿದೆ: ಸಿದ್ದರಾಮಯ್ಯ ವ್ಯಂಗ್ಯ

Spread the love

ಗೋಕಾಕ (ಬೆಳಗಾವಿ ಜಿಲ್ಲೆ): ‘ಯಡಿಯೂರಪ್ಪ ನನ್ನ ತಟ್ಟೆಯಲ್ಲಿ ನೊಣ ಹುಡುಕುತ್ತಿದ್ದಾರೆ. ಅವರ ತಟ್ಟೆಯಲ್ಲಿ ಹೆಗ್ಗಣ ಮಾತ್ರವಲ್ಲ; ಕತ್ತೆಯೇ ಸತ್ತು ಬಿದ್ದಿದೆ. ಅಂಥವರಿಗೆ ನನ್ನ ರಾಜೀನಾಮೆ ಕೇಳುವ ಹಕ್ಕು‌ ಇದೆಯೇ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಖಾರವಾಗಿ ಪ್ರಶ್ನಿಸಿದರು.

ಯಡಿಯೂರಪ್ಪ ತಟ್ಟೆಯಲ್ಲಿ ಕತ್ತೆ ಸತ್ತು ಬಿದ್ದಿದೆ: ಸಿದ್ದರಾಮಯ್ಯ ವ್ಯಂಗ್ಯ

ನಗರದಲ್ಲಿ ಸೋಮವಾರ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ‘ಬಿಜೆಪಿ ಪಾದಯಾತ್ರೆ ಮುಗಿಯುವುದರೊಳಗೆ ನಾನು ರಾಜೀನಾಮೆ ನೀಡಬೇಕು ಎಂದು ಯಡಿಯೂರಪ್ಪ ಕೇಳಿದ್ಧಾರೆ. ಸ್ವತಃ ಅವರೇ ಪೋಕ್ಸೊ ಪ್ರಕರಣದಲ್ಲಿ ಸೊಕ್ಕಿಕೊಂಡಿದ್ದಾರೆ. ಯಾವ ನೈತಿಕತೆ ಇದೆ ಅವರಿಗೆ’ ಎಂದರು.

‘ಅವರ ವಿರುದ್ಧ ಈಗಾಗಲೇ ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ. ನ್ಯಾಯಾಲಯ ಜಾಮೀನು‌ ನೀಡಿದೆ ಎಂಬ ಕಾರಣಕ್ಕೆ ಯಡಿಯೂರಪ್ಪ ಹೊರಗೆ ಇದ್ದಾರೆ. ಇಲ್ಲದಿದ್ದರೆ ಜೈಲಿನಲ್ಲಿ ಇರಬೇಕಾಗಿತ್ತು. ಅವರ ಮೇಲೆ ಎಷ್ಟು ಕೇಸ್ ಇವೆ, ಯಾವಯಾವ ಕೇಸ್ ಇವೆ ಎಂದು ಅವರಿಗೆ ಗೊತ್ತಾದರೂ ಇದೆಯೇ’ ಎಂದರು.

‘ಯಡಿಯೂರಪ್ಪ ಸೇರಿದಂತೆ ಬಿಜೆಪಿಯವರು 21 ಪ್ರಕರಣ ಎದುರಿಸುತ್ತಿದ್ದಾರೆ. ಈಗಾಗಲೇ ಕೆಲವನ್ನು ಸಿಐಡಿ ತನಿಖೆಗೆ ಕೊಟ್ಟಿದ್ದೇನೆ. ಉಳಿದ ಎಲ್ಲ ಪ್ರಕರಣಗಳನ್ನೂ‌ ತನಿಖೆಗೆ ನೀಡಲಾಗುವುದು’ ಎಂದು ಉತ್ತರಿಸಿದರು.


Spread the love

About Laxminews 24x7

Check Also

ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ಅಪರಾಧಿಗೆ 30 ವರ್ಷ ಶಿಕ್ಷೆ ಪ್ರಕಟ

Spread the loveಬೆಳಗಾವಿ: ಅಪ್ರಾಪ್ತೆಯ ಮೇಲೆ ಅತ್ಯಾಚಾರ ಎಸಗಿದ್ದ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದ ಶಂಕರ ನಗರ ನಿವಾಸಿ ದರ್ಶನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ