Breaking News

ವಯನಾಡು ಭೂಕುಸಿತ: ದೇಣಿಗೆ ನೀಡಿದ ಕಬಡ್ಡಿ ಪಟು

Spread the love

ರಿಪ್ಪನ್‌ಪೇಟೆ: ಕೇರಳದ ವಯನಾಡಿನಲ್ಲಿ ಭಾರಿ ಮಳೆಯಿಂದ ಸಂಭವಿಸಿದ ಭೂ ಕುಸಿತದಿಂದ ಹಾನಿಗೊಳಗಾದ ಸಂತ್ರಸ್ತರಿಗೆ ಇಲ್ಲಿನ ರಾಮಕೃಷ್ಣ ಪ್ರೌಢಶಾಲೆಯ 9ನೇ ತರಗತಿಯ ವಿದ್ಯಾರ್ಥಿನಿ, ಕಬಡ್ಡಿ ಪಟು ಆರ್‌. ಶ್ರೇಯಾ ಹಾಗೂ ಆಕೆಯ ಸೋದರ ಶ್ರವಂತ್‌ ₹ 15,000 ದೇಣಿಗೆ ನೀಡಿದ್ದಾರೆ.

ವಯನಾಡು ಭೂಕುಸಿತ: ದೇಣಿಗೆ ನೀಡಿದ ಕಬಡ್ಡಿ ಪಟು

ಈಚೆಗೆ ಹೈದರಾಬಾದ್‌ನಲ್ಲಿ ನಡೆದ 14 ವರ್ಷದೊಳಗಿನ ಬಾಲಕಿಯರ ಕಬಡ್ಡಿ ಪಂದ್ಯಾವಳಿಯಲ್ಲಿ ರಾಜ್ಯ ತಂಡವನ್ನು ಪ್ರತಿನಿಧಿಸಿದ್ದ ಶ್ರೇಯಾ ‌ಹಾಗೂ ಇದೇ ಶಾಲೆಯ 10ನೇ ತರಗತಿ ವಿದ್ಯಾರ್ಥಿ ಶ್ರವಂತ್‌ ಅವರು ಗ್ರಾಮದ ಸವಿತಾ ಮತ್ತು ರಾಘವೇಂದ್ರ ಅವರ ಮಕ್ಕಳು.

ರಾಜ್ಯ ತಂಡ ಪ್ರತಿನಿಧಿಸಿದ್ದ ಶ್ರೇಯಾಗೆ ರಾಜ್ಯ ಸರ್ಕಾರದಿಂದ ₹ 10,000 ಕ್ರೀಡಾ ವಿದ್ಯಾರ್ಥಿವೇತನ ದೊರೆತಿತ್ತು. ಅದರೊಂದಿಗೆ ಶ್ರವಂತ್‌ ಕೂಡಿಟ್ಟ ₹ 5,000 ಸೇರಿಸಿ ಇಲ್ಲಿನ ನಾಡಕಚೇರಿಯಲ್ಲಿ ಭಾನುವಾರ ತಹಶೀಲ್ದಾರ್ ರಶ್ಮಿ ಹಾಲೇಶ್ ಅವರ ಮೂಲಕ ವಯನಾಡ್‌ ಸಂತ್ರಸ್ತರ ನಿಧಿಗೆ ದೇಣಿಗೆ ನೀಡಿದರು.


Spread the love

About Laxminews 24x7

Check Also

ರಾಜ್ಯದಲ್ಲಿರುವ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಆಪರೇಷನ್ ಆರಂಭ

Spread the loveಬೆಂಗಳೂರು: ಬಾಂಗ್ಲಾ ದೇಶೀಯರು ಸೇರಿದಂತೆ ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರು ವವರನ್ನು ಪತ್ತೆ ಹಚ್ಚಿ, ಗಡೀಪಾರು ಮಾಡುವ ಕಾರ್ಯಾಚರಣೆಯನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ