Breaking News

ಬಾಕಿ ಹಣ ಬಿಡುಗಡೆಗೆ ಆಗ್ರಹಿಸಿ ಕಬ್ಬು ಬೆಳೆಗಾರರ ಪ್ರತಿಭಟನೆ

Spread the love

ಲಬುರಗಿ: ಜಿಲ್ಲೆಯಲ್ಲಿರುವ ರೇಣುಕಾ ಶುಗರ್ಸ್ ಸಕ್ಕರೆ ಕಾರ್ಖಾನೆ ಹಾಗೂ ಕೆಪಿಆರ್ ಚಿಣಮಗೇರಾ ಸಕ್ಕರೆ ಕಾರ್ಖಾಬೆ ಸೇರಿದಂತೆ ವಿವಿಧ ಸಕ್ಕರೆ ಕಾರ್ಖಾನೆಗಳು ಬಾಕಿ ಉಳಿಸಿಕೊಂಡ ರೈತರ ಕಬ್ಬಿನ ಬಾಕಿ ಬಿಲ್ ಕೂಡಲೇ ಬಿಡುಗಡೆ ಮಾಡುವಂತೆ ಒತ್ತಾಯಿಸಿ ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಘಟಕದ ನೇತೃತ್ವದಲ್ಲಿ ಗುರುವಾರ ಜಿಲ್ಲಾಧಿಕಾರಿ ‌ಕಚೇರಿ ಎದುರು ರಸ್ತೆ ಸಂಚಾರ ತಡೆದು ಪ್ರತಿಭಟನೆ ನಡೆಸಲಾಯಿತು.

ಕಲಬುರಗಿ: ಬಾಕಿ ಹಣ ಬಿಡುಗಡೆಗೆ ಆಗ್ರಹಿಸಿ ಕಬ್ಬು ಬೆಳೆಗಾರರ ಪ್ರತಿಭಟನೆ

ನಗರದ ಸರ್ದಾರ್ ವಲ್ಲಭ್ ಭಾಯಿ ಪಟೇಲ್ ವೃತ್ತದಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆ ಜಿಲ್ಲಾಧಿಕಾರಿ ಕಚೇರಿ ತನಕ ಸಾಗಿತು. ಬಳಿಕ ಪ್ರತಿಭಟನಕಾರರು ರಾಜ್ಯ ಸರ್ಕಾರ, ಜಿಲ್ಲಾಡಳಿತ ಹಾಗೂ ಸಕ್ಕರೆ ಕಾರ್ಖಾನೆಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಜಿಲ್ಲಾಧಿಕಾರಿ ‌ಕಚೇರಿ ಆವರಣ ಪ್ರವೇಶಿಸಲು ನಿರಾಕರಿಸಿದ ಪ್ರತಿಭಟನಕಾರರು ರಸ್ತೆಯಲ್ಲಿ‌ ಮಾನವ ಸರಪಳಿ‌ ನಿರ್ಮಿಸಿ, ಬಳಿಕ ರಸ್ತೆಯಲ್ಲಿ‌ ಕುಳಿತು ಧರಣಿ‌ ನಡೆಸಿದರು.


Spread the love

About Laxminews 24x7

Check Also

ಡಿಕೆಶಿ ಪಕ್ಷದ ಅಧ್ಯಕ್ಷರು. ರಾಜಣ್ಣ ಪಕ್ಷದ ಶಾಸಕರು. ಅವರಿಬ್ಬರು ಭೇಟಿ ಆಗಿರುವುದರಲ್ಲಿ ತಪ್ಪೇನಿದೆ ಎಂದ ಶಾಸಕ ಲಕ್ಷ್ಮಣ್​​

Spread the loveಚಿಕ್ಕೋಡಿ: “ಡಿಸಿಎಂ ಡಿ.ಕೆ.ಶಿವಕುಮಾರ್​​​ ಮತ್ತು ಮಾಜಿ ಸಚಿವ ಕೆ.ಎನ್​​.ರಾಜಣ್ಣ ಭೇಟಿ ಆಗಿರುವುದಲ್ಲಿ ತಪ್ಪೇನು? ಅವರು ಪಕ್ಷದ ಅಧ್ಯಕ್ಷರು, ಇವರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ