Breaking News

ಸಹಕಾರದ ಸೇವೆಯಿಂದ ಆತ್ಮತೃಪ್ತಿ: ನ್ಯಾ ಸುಮಲತಾ ಬೆಣ್ಣಿಕಲ್ಲ

Spread the love

ವದತ್ತಿ: ಇಲ್ಲಿನ ನ್ಯಾಯಾಲಯದಲ್ಲಿನ ನ್ಯಾಯಾಧೀಶರು ಹಾಗೂ ವಕೀಲರ ಸಹಕಾರದಿಂದ ಸಲ್ಲಿಸಿದ ಸೇವೆ ಆತ್ಮತೃಪ್ತಿ ತಂದಿದೆ ಎಂದು ಪ್ರಧಾನ ದಿವಾಣಿ ನ್ಯಾಯಾಧೀಶೆ ಸುಮಲತಾ ಬೆಣ್ಣಿಕಲ್ಲ ಹೇಳಿದರು.

ಇಲ್ಲಿನ ನ್ಯಾಯಾಲಯ ಸಂಕೀರ್ಣದಲ್ಲಿರುವ ನ್ಯಾಯವಾದಿಗಳ ಸಂಘದ ಸಭಾಭವನದಲ್ಲಿ ಪದೋನ್ನತ್ತಿ ಹೊಂದಿ ವರ್ಗಾವಣೆ ಹೊಂದಿದ ಪ್ರಯುಕ್ತ ನಡೆದ ಬೀಳ್ಕೊಡುಗೆ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.

ಸಹಕಾರದ ಸೇವೆಯಿಂದ ಆತ್ಮತೃಪ್ತಿ: ನ್ಯಾ ಸುಮಲತಾ ಬೆಣ್ಣಿಕಲ್ಲ

ನಾಗರಿಕ ಸೇವೆಯಲ್ಲಿ ಪದೋನ್ನತ್ತಿ, ವರ್ಗಾವಣೆ ಅನಿವಾರ್ಯ. ಆದರೆ ಇಲ್ಲಿನವರೊಂದಿಗಿನ ಭಾಂದವ್ಯ ಅವಿಸ್ಮರಣೀಯ. ಸೇವೆಗೆ ನೇಮಕಗೊಂಡ ಆರಂಭದಲ್ಲಿ ಇಲ್ಲಿನ ಸೌಕರ್ಯಗಳ ಕೊರತೆಯ ಕುರಿತು ಆತಂಕವಿತ್ತು. ಆದರೆ, ಇಲ್ಲಿನ ಪರಿಸರವು ಸಮಸ್ಯೆಗಳನ್ನು ದೂರಾಗಿಸಿತು. ಕರ್ತವ್ಯದಲ್ಲಿ ನ್ಯಾಯಾಧೀಶರು, ವಕೀಲರು ಹಾಗೂ ಜನರು ತೋರಿದ ಪ್ರೀತಿ ವಿಶ್ವಾಸ ಎಂದಿಗೂ ಮರೆಯಲಾಗದು. ನನ್ನ ವೃತ್ತಿ ಬದುಕಿಗೆ ಸವದತ್ತಿ ಮೈಲುಗಲ್ಲಾಗಿ ನೆನಪಲ್ಲಿರುತ್ತದೆ ಎಂದರು.


Spread the love

About Laxminews 24x7

Check Also

ರಾಜ್ಯದಲ್ಲಿರುವ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಆಪರೇಷನ್ ಆರಂಭ

Spread the loveಬೆಂಗಳೂರು: ಬಾಂಗ್ಲಾ ದೇಶೀಯರು ಸೇರಿದಂತೆ ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರು ವವರನ್ನು ಪತ್ತೆ ಹಚ್ಚಿ, ಗಡೀಪಾರು ಮಾಡುವ ಕಾರ್ಯಾಚರಣೆಯನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ