ಸವದತ್ತಿ: ಇಲ್ಲಿನ ನ್ಯಾಯಾಲಯದಲ್ಲಿನ ನ್ಯಾಯಾಧೀಶರು ಹಾಗೂ ವಕೀಲರ ಸಹಕಾರದಿಂದ ಸಲ್ಲಿಸಿದ ಸೇವೆ ಆತ್ಮತೃಪ್ತಿ ತಂದಿದೆ ಎಂದು ಪ್ರಧಾನ ದಿವಾಣಿ ನ್ಯಾಯಾಧೀಶೆ ಸುಮಲತಾ ಬೆಣ್ಣಿಕಲ್ಲ ಹೇಳಿದರು.
ಇಲ್ಲಿನ ನ್ಯಾಯಾಲಯ ಸಂಕೀರ್ಣದಲ್ಲಿರುವ ನ್ಯಾಯವಾದಿಗಳ ಸಂಘದ ಸಭಾಭವನದಲ್ಲಿ ಪದೋನ್ನತ್ತಿ ಹೊಂದಿ ವರ್ಗಾವಣೆ ಹೊಂದಿದ ಪ್ರಯುಕ್ತ ನಡೆದ ಬೀಳ್ಕೊಡುಗೆ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.
ನಾಗರಿಕ ಸೇವೆಯಲ್ಲಿ ಪದೋನ್ನತ್ತಿ, ವರ್ಗಾವಣೆ ಅನಿವಾರ್ಯ. ಆದರೆ ಇಲ್ಲಿನವರೊಂದಿಗಿನ ಭಾಂದವ್ಯ ಅವಿಸ್ಮರಣೀಯ. ಸೇವೆಗೆ ನೇಮಕಗೊಂಡ ಆರಂಭದಲ್ಲಿ ಇಲ್ಲಿನ ಸೌಕರ್ಯಗಳ ಕೊರತೆಯ ಕುರಿತು ಆತಂಕವಿತ್ತು. ಆದರೆ, ಇಲ್ಲಿನ ಪರಿಸರವು ಸಮಸ್ಯೆಗಳನ್ನು ದೂರಾಗಿಸಿತು. ಕರ್ತವ್ಯದಲ್ಲಿ ನ್ಯಾಯಾಧೀಶರು, ವಕೀಲರು ಹಾಗೂ ಜನರು ತೋರಿದ ಪ್ರೀತಿ ವಿಶ್ವಾಸ ಎಂದಿಗೂ ಮರೆಯಲಾಗದು. ನನ್ನ ವೃತ್ತಿ ಬದುಕಿಗೆ ಸವದತ್ತಿ ಮೈಲುಗಲ್ಲಾಗಿ ನೆನಪಲ್ಲಿರುತ್ತದೆ ಎಂದರು.