Breaking News

ದುಬೈನಲ್ಲಿ ಅಂಗಡಿ ಕೊಡಿಸುವುದಾಗಿ ₹35 ಲಕ್ಷ ವಂಚನೆ

Spread the love

ಶಿರಸಿ: ದುಬೈನಲ್ಲಿ ಅಂಗಡಿ ಕೊಡಿಸುವುದಾಗಿ ನಂಬಿಸಿ, ಮಂಗಳೂರು ಮೂಲದ ವ್ಯಕ್ತಿಯೊಬ್ಬನಿಗೆ ಶಿರಸಿ ಮೂಲದ ಮೂವರು ₹35 ಲಕ್ಷ ವಂಚನೆ ಮಾಡಿದ ಕುರಿತು ಶನಿವಾರ ಶಿರಸಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಲ್ಲೂಕಿನ ಹುಲೇಕಲ್ ಸಮೀಪದ ಹೆಂಚರಟಾದ ಅಬ್ದುಲ್ ಮತಿನ‌್ ಅಬ್ದುಲ್ ಗಫಾರ ಸಾಬ್, ಅಬ್ದುಲ್ ರೆಹಮಾನ್‌ ಅಬ್ದುಲ್ ಗಫಾರ್‌ ಸಾಬ್ ಹಾಗೂ ನಾಝೀಯಾ ಅಬ್ದುಲ್ ಮತೀನ್ ಆರೋಪಿಗಳಾಗಿದ್ದಾರೆ.

ಈ ಮೂವರು ಮಂಗಳೂರು ಹಂಪನಕಟ್ಟಾ ಲೈಟ್ ಹೌಸ್ ಹಿಲ್ ರಸ್ತೆಯ ಬಿ.ಐ.ಮೊಹಮ್ಮದ್‌ ರಫೀಕ್ ಎಂಬಾತನಿಗೆ ದುಬೈನಲ್ಲಿ ಅಂಗಡಿ ಕೊಡಿಸುವುದಾಗಿ ನಂಬಿಸಿ ₹35 ಲಕ್ಷ ಪಡೆದು, ಅಂಗಡಿ ಕೊಡಿಸದೇ, ಪಡೆದ ಹಣವನ್ನು ಹಿಂದಿರುಗಿಸದೇ ಮೋಸ ಮಾಡಿದ್ದಾರೆ ಎಂದು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಈ ಕುರಿತು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಜರುಗಿದ ಚಳಿಗಾಲ ಆಧಿವೇಶನ ಪೂರ್ವ ಸಿದ್ಧತಾ ಸಭೆ

Spread the love ಬೆಳಗಾವಿಯಲ್ಲಿ ಡಿ.8ರಿಂದ ನಡೆಯಲಿರುವ ವಿಧಾನಮಂಡಳ ಚಳಿಗಾಲ ಅಧಿವೇಶನಕ್ಕೆ ಸಂಬಂಧಿಸಿದಂತೆ ರಚಿಸಲಾಗಿರುವ ವಿವಿಧ ಸಮಿತಿ ಹಾಗೂ ಉಪ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ