ಬೆಂಗಳೂರು : ಬಿಎಂಟಿಸಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕನೊಬ್ಬನ ಮೇಲೆ ಕಂಡಕ್ಟರ್ ಹಲ್ಲೆ ನಡೆಸಿದ ವಿಡಿಯೋ ವೈರಲ್ ಆಗಿತ್ತು. ಘಟನೆಗೆ ಸಂಬಂಧಿಸಿದಂತೆ ಬಿಎಂಟಿಸಿ ಕಂಡಕ್ಟರ್ ಶ್ರೀನಿವಾಸ್ ಅವರನ್ನು ಅಮಾನತು ಮಾಡಲಾಗಿದೆ.
5 ರೂ ಚಿಲ್ಲರೆ ಕೊಡುವ ವಿಚಾರಕ್ಕೆ ಕಂಡಕ್ಟರ್ ಅಭಿನವ್ ರಾಜ್ ಎಂಬುವವರ ಮೇಲೆ ಹಲ್ಲೆ ನಡೆಸಿದ್ದರು.
ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡಿತ್ತು. ಆಗಸ್ಟ್ 6 ರಂದು ಅಭಿನವ್ ರಾಜ್ ಮೇಲೆ ಹಲ್ಲೆ ನಡೆದಿತ್ತು, ನಂತರ ಅಭಿನವ್ ಬಿಎಂಟಿಸಿಗೆ ದೂರು ನೀಡಿದ್ದರು. ಈ ಹಿನ್ನೆಲೆ ಬಿಎಂಟಿಸಿ ಕಂಡಕ್ಟರ್ ಶ್ರೀನಿವಾಸ್ ಅವರನ್ನು ಅಮಾನತು ಮಾಡಿ ಬಿಎಂಟಿಸಿ ಆದೇಶ ಹೊರಡಿಸಿದೆ.
ಆ ವ್ಯಕ್ತಿಯು ಘಟನೆಯ ವೀಡಿಯೊವನ್ನು ರೆಕಾರ್ಡ್ ಮಾಡಿ ನ್ಯಾಯಕ್ಕೆ ಆಗ್ರಹಿಸಿ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಾನೆ.ಮಂಗಳವಾರ ರಾತ್ರಿ ಮಾರತ್ತಹಳ್ಳಿಯ ರೇನ್ಬೋ ಆಸ್ಪತ್ರೆಯ ಬಳಿ ಈ ಹಲ್ಲೆ ನಡೆದಿದೆ ಎಂದು ಅವರು ಟ್ವೀಟ್ ಮಾಡಿದ್ದಾರೆ.
ವೀಡಿಯೊದಲ್ಲಿ, ಬಸ್ ಕಂಡಕ್ಟರ್ ವ್ಯಕ್ತಿಯ ಮೇಲೆ ದೈಹಿಕವಾಗಿ ಹಲ್ಲೆ ನಡೆಸುವುದನ್ನು ಕಾಣಬಹುದು.