Breaking News

ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಮತ್ತೆ ಹಾಡಹಗಲೇ ಚಾಕು ಇರಿದ ವ್ಯಕ್ತಿ

Spread the love

ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಮತ್ತೆ ಹಾಡಹಗಲೇ ನೆತ್ತರು ಹರಿದಿದೆ. ಕಟಿಂಗ್ ಶಾಪ್‍ಗೆ ಆಗಮಿಸಿದ್ದ ಮಾಜಿ ರೌಡಿಶೀಟರ್ ಗೆ ಚಾಕು ಇರಿದು ಕೊಲೆ ಮಾಡಿರುವ ಘಟನೆ ನಗರದ ಬಾಬಾಸಾನ್ ಗಲ್ಲಿಯಲ್ಲಿ ನಡೆದಿದೆ.

ಕಮರಿಪೇಟೆಯ ಹಳೇ ರೌಡಿ ಶೀಟರ್ ರಮೇಶ್ ಭಾಂಡಗೆ ಚಾಕು ಇರಿದು ಕೊಲೆ ಮಾಡಲಾಗಿದೆ. ರಮೇಶ್ ಭಾಂಡಗೆ ಹಲವು ಅಕ್ರಮ ಧಂದೆಯಲ್ಲಿ ಈ ಹಿಂದೆ ಭಾಗಿಯಾಗಿದ್ದ, ಇಂದು ಮಧ್ಯಾಹ್ನ ಕಟಿಂಗ್ ಶಾಪ್ ಗೆ ಬಂದಿದ್ದ ವೇಳೆ ವ್ಯಕ್ತಿಯೊಬ್ಬ ಚಾಕು ಇರಿದು ಹತ್ಯೆಗೈದಿದ್ದಾನೆ.

ಕೊಲೆ ಮಾಡಿದ ನಂತರ ರೌಡಿಶೀಟರ್ ಹಾಗೂ ಕೊಲೆ ಮಾಡಿದ ವ್ಯಕ್ತಿ ಘಟನಾ ಸ್ಥಳದಲ್ಲಿ ಓಡಾಡಿದ ದೃಶ್ಯಗಳು ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ರಮೇಶ್ ಬಾಂಡಗೆಗೆ ಹಾಡಹಗಲೇ ಚಾಕು ಇರಿದ ವ್ಯಕ್ತಿ ಪರಾರಿಯಾಗಿದ್ದು, ಘಟನೆಗೆ ಆಸ್ತಿ ವಿವಾದ ಕಾರಣ ಎನ್ನಲಾಗಿದೆ. ಘಟನೆ ಬೆಳಕಿಗೆ ಬರುತ್ತಿದ್ದಂತೆ ಸ್ಥಳಕ್ಕೆ ಶಹರ ಪೊಲೀಸ್ ಅಧಿಕಾರಿಗಳಿಂದ ಭೇಟಿ ನೀಡಿ ಪರಿಶೀಲನೆ ನಡೆಸಿ ತನಿಖೆ ಮುಂದುವರೆಸಿದ್ದಾರೆ.


Spread the love

About Laxminews 24x7

Check Also

ಹಾಸ್ಟೆಲ್ ನಾಲ್ಕನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

Spread the loveಹುಬ್ಬಳ್ಳಿ: ಕಾಲೇಜಿನ ವಿದ್ಯಾರ್ಥಿಯೊಬ್ಬ ಹಾಸ್ಟೆಲ್ ನಾಲ್ಕನೇ ಮಹಡಿಯಿಂದ ಬಿದ್ದು ಅನುಮಾನಸ್ಫದವಾದ ರೀತಿಯಲ್ಲಿ ಸಾವನ್ನಪ್ಪಿದ ಘಟನೆ ಭೈರಿದೇರಕೊಪ್ಪದಲ್ಲಿರುವ ಸನಾ ಕಾಲೇಜಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ