Breaking News

ದುಡಿಮೆಯ ಒಂದು ಭಾಗ ದಾನಕ್ಕೆ ಮೀಸಲಿಡಿ: ಎಂ.ಎ.ರಡ್ಡೇರ

Spread the love

ಮುಂಡರಗಿ: ‘ದಾನ ಮಾಡುವುದು ಸತ್ಕಾರ್ಯವಾಗಿದ್ದು, ಸಮಾಜದಲ್ಲಿ ಸಾವಿರಾರು ಕುಟುಂಬಗಳು ದಾನಿಗಳು ನೀಡುವ ದೇಣಿಗೆಯನ್ನು ಅವಲಂಬಿಸಿವೆ. ನಾವೆಲ್ಲ ಪ್ರತಿವರ್ಷ ನಮ್ಮ ದುಡಿಮೆಯ ಶೇ 35ರಷ್ಟು ಭಾಗವನ್ನು ದಾನ, ಧರ್ಮಕ್ಕೆ ಮೀಸಲಿಡಬೇಕು’ ಎಂದು ನಿವೃತ್ತ ಡಿಡಿಪಿಐ ಎಂ.ಎ.ರಡ್ಡೇರ ತಿಳಿಸಿದರು.

ದುಡಿಮೆಯ ಒಂದು ಭಾಗ ದಾನಕ್ಕೆ ಮೀಸಲಿಡಿ: ರಡ್ಡೇರ

ರಡ್ಡಿ ಬಳಗವು ಪಟ್ಟಣದ ಬೃಂದಾವನ ವೃತ್ತದಲ್ಲಿರುವ ವೆಂಕಟೇಶ್ವರ ಭವನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಮಾತನಾಡಿದರು.

‘ನಮ್ಮ ನಾಡಿನಲ್ಲಿ ಬಾಳಿಹೋದ ಶರಣರು, ಸಂತರು, ಮಹಾತ್ಮರು ನಾವು ಹೇಗೆ ಬದುಕಬೇಕು ಎನ್ನುವುದನ್ನು ತಿಳಿಸಿದ್ದಾರೆ. ಕುಟುಂಬವನ್ನು ನಿರ್ವಹಿಸುವ, ಎಲ್ಲರನ್ನೂ ಪ್ರೀತಿ, ಗೌರವದಿಂದ ಕಾಣುವ, ದಾನ ಮಾಡುವ ಬಗೆಯನ್ನು ಶರಣೆ ಹೇಮರಡ್ಡಿ ಮಲ್ಲಮ್ಮ ತಿಳಿಸಿಕೊಟ್ಟಿದ್ದಾರೆ’ ಎಂದರು.

ಭೂಮಿಕಾ ರಾಜೂರ ಮಾತನಾಡಿ, ‘ವಿಶೇಷ ಸಾಧನೆ ಮಾಡಿದ ಮಹನೀಯರನ್ನು ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸಮಾಜ ಗುರುತಿಸಿ ಸನ್ಮಾನ ಮಾಡುತ್ತಿರುವುದು ಸಂತಸದ ಸಂಗತಿ. ಇದು ಇತರರಿಗೂ ಸಾಧನೆ ಮಾಡಲು ಪ್ರೇರಣೆಯಾಗುತ್ತದೆ’ ಎಂದು ತಿಳಿಸಿದರು.

 


Spread the love

About Laxminews 24x7

Check Also

5 ಹುಲಿಗಳು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಅರಣ್ಯಾಧಿಕಾರಿಗಳಿಗೆ ಕಡ್ಡಾಯ ರಜೆ ನೀಡಿ ಪಿಸಿಸಿಎಫ್ ಆದೇಶಿಸಿದ್ದಾರೆ.

Spread the loveಚಾಮರಾಜನಗರ: ಮಲೆಮಹದೇಶ್ವರ ವನ್ಯಜೀವಿಧಾಮದ ಮೀಣ್ಯಂ ಅರಣ್ಯದಲ್ಲಿ 5 ಹುಲಿಗಳು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಅರಣ್ಯಾಧಿಕಾರಿಗಳಿಗೆ ಕಡ್ಡಾಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ