Breaking News

ಹೋಟೆಲ್ ನಲ್ಲಿ ಕುಕ್ಕರ್ ಸ್ಫೋಟ: 9 ಜನರಿಗೆ ಗಂಭೀರ ಗಾಯ

Spread the love

ಬೆಳಗಾವಿ: ಹೋಟೆಲ್ ನಲ್ಲಿ ಕುಕ್ಕರ್ ಸ್ಫೋಟಗೊಂಡು 9 ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿ ಪಟ್ಟಣದಲ್ಲಿ ನಡೆದಿದೆ.

ಸವದತ್ತಿಗೆ ದೇವರ ದರ್ಶನಕ್ಕೆಂದು ಬಂದಿದ್ದ ಭಕ್ತರು ಹೋಟೆಲ್ ನಲ್ಲಿ ತಂಗಿದ್ದರು. ಈ ವೇಳೆ ಈ ಅವಘಡ ಸಂಭವಿಸಿದೆ. ಘಟನೆಯಲ್ಲಿ ಯಾದಗಿರಿಯ ಐವರು ಹಾಗೂ ಬೆಂಗಳೂರಿನ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.

 

ದೇವರ ದರ್ಶನಕ್ಕೆ ಬಂದಿದ್ದ ಭಕ್ತರು ಸವದತ್ತಿ ಪಟ್ಟಣದ ಹೋಟೆಲ್ ರೂಂ ನಲ್ಲಿ ತಂಗಿದ್ದರು. ಈ ವೇಳೆ ಹೋಟೆಲ್ ರೂಂ ನಲ್ಲಿ ಹೋಳಿಗೆ ಮಾಡಲೆಂದು ಕುಕ್ಕರ್ ನಲ್ಲಿ ಬೇಳೆ ಇಟ್ಟಿದ್ದಾರೆ. ಆದರೆ ಬೇಳೆಗೆ ನೀರು ಹಾಕಿ ಇಡುವುದನ್ನು ಮರೆತಿದ್ದಾರೆ. ಈ ವೇಳೆ ಕುಕ್ಕರ್ ಏಕಾಏಕಿ ಸ್ಫೋಟಗೊಂಡು, ಹೋಟೆಲ್ ಗೆ ಬೆಂಕಿ ಆವರಿಸಿದೆ. ಘಟನೆಯಲ್ಲಿ 9 ಜನರು ಗಾಯಗೊಂಡಿದ್ದಾರೆ.

ಘಟನಾ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಗಾಯಾಳುಗಳಲ್ಲಿ 6 ಜನರನ್ನು ಸವದತ್ತಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂವರನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.


Spread the love

About Laxminews 24x7

Check Also

5 ಹುಲಿಗಳು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಅರಣ್ಯಾಧಿಕಾರಿಗಳಿಗೆ ಕಡ್ಡಾಯ ರಜೆ ನೀಡಿ ಪಿಸಿಸಿಎಫ್ ಆದೇಶಿಸಿದ್ದಾರೆ.

Spread the loveಚಾಮರಾಜನಗರ: ಮಲೆಮಹದೇಶ್ವರ ವನ್ಯಜೀವಿಧಾಮದ ಮೀಣ್ಯಂ ಅರಣ್ಯದಲ್ಲಿ 5 ಹುಲಿಗಳು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಅರಣ್ಯಾಧಿಕಾರಿಗಳಿಗೆ ಕಡ್ಡಾಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ