Breaking News

750 ಸರ್ವೇಯರ್‌ ನೇಮಕಕ್ಕೆ ಕ್ರಮ: ಕೃಷ್ಣ ಬೈರೇಗೌಡ

Spread the love

ಳ್ಳಾರಿ: ರಾಜ್ಯದಲ್ಲಿ ಖಾಲಿಯಿರುವ ಸರಕಾರಿ ಮತ್ತು ಪರವಾನಿಗೆಯುಳ್ಳ ಸರ್ವೇಯರ್‌ ಸೇರಿ ಎಲ್ಲ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು.
ಸುದ್ದಿಗಾರರ ಜತೆ ಮಾತನಾಡಿದ ಅವರು, ರಾಜ್ಯದಲ್ಲಿ ಸರ್ವೇಯರ್‌ಗಳ ಕೊರತೆ ಇದ್ದು, ಇದು ಸಿಎಂ ಸಿದ್ದರಾಮಯ್ಯ ಅವರಿಗೂ ಜನತಾ ದರ್ಶನದಲ್ಲಿ ಗಮನಕ್ಕೆ ಬಂದಿದೆ.

ಹಾಗಾಗಿ ಅವರೇ ರಾಜ್ಯದಲ್ಲಿ ಖಾಲಿ ಇರುವ ಎಲ್ಲ 750 ಸರ್ವೇಯರ್‌ ಭರ್ತಿಗೆ ಅನುಮತಿ ನೀಡಿದ್ದಾರೆ. ಪರವಾನಿಗೆಯುಳ್ಳ 1191 ಸರ್ವೇಯರ್‌ಗಳನ್ನು ಈಗಾಗಲೇ ನೇಮಕ ಮಾಡಲಾಗಿದೆ. 34 ಎಡಿಎಲ್‌ಆರ್‌ ನೇಮಕಾತಿ ಪ್ರಕ್ರಿಯೆ ಈಗಾಗಲೇ ಚಾಲನೆಯಲ್ಲಿದ್ದು, ಇನ್ನೆರಡು ತಿಂಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದರು.


Spread the love

About Laxminews 24x7

Check Also

ತಂದೆಗೆ ಲಿವರ್ ದಾನ ಮಾಡಿ ಮಹಾದಾನಿ ಆದ ಮಗ

Spread the loveಬೆಳಗಾವಿ: ಲಿವರ್ ಸಂಪೂರ್ಣವಾಗಿ ನಿಷ್ಕ್ರೀಯವಾಗಿ ಜೀವನ್ಮರಣದ ನಡುವೆ ಹೋರಾಡುತ್ತಿದ್ದ ರೋಗಿಗೆ ಯಶಸ್ವಿ ಲಿವರ್ ಕಸಿ ಶಸ್ತ್ರಚಿಕಿತ್ಸೆಯನ್ನು ನೆರವೇರಿಸಿ ಜೀವವನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ