ಬೆಂಗಳೂರು: ನಾಳೆ ಬೆಂಗಳೂರಿನಲ್ಲಿ ರಸ್ತೆಗೆ ಇಳಿಯುವ ಎನ್ನ ಎಚ್ಚರವಾಗಿರಿ. ವಿವಿಧ ಬೇಡಿಕೆಗಳನ್ನು ಆಗ್ರಹಿಸಿ ನಾಳೆ ಆಟೋ- ಟ್ಯಾಕ್ಸಿ ಚಾಲಕರು ಮುಷ್ಕರ ಕರೆ ನೀಡಿದ್ದಾರೆ.
ವಾಹನಗಳ ಸಾಲಮನ್ನಾ ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವ ಕುರಿತಾಗಿ 20 ಒಕ್ಕೂಟಗಳು ಸೇರಿ ನಾಳೆ ಮುಷ್ಕರಕ್ಕೆ ಕರೆ ನೀಡಿವೆ.
ಬೇಡಿಕೆ ಏನು?
– ಆಟೋ ಮತ್ತು ಟ್ಯಾಕ್ಸಿ ಚಾಲಕರಿಗೆ ಜಾತಿವಾರು ನಿಗಮಗಳಿಂದ ನೇರ ಸಾಲ ಯೋಜನೆ ಅಡಿಯಲ್ಲಿ ಆಟೋ ಚಾಲಕರಿಗೆ 1,00 ಲಕ್ಷ ರೂ ಮತ್ತು ಟ್ಯಾಕ್ಸಿ ಚಾಲಕರುಗಳಿಗೆ 2,00 ಲಕ್ಷ ಸಾಲವನ್ನು ನೀಡಬೇಕು.
– ಅಸಂಘಟಿತ ಚಾಲಕರ ನಿಗಮ ಸ್ಥಪನೆಯಾಗಬೇಕು.
– ಆಟೋ ಮತ್ತು ಟ್ಯಾಕ್ಸಿ ಚಾಲಕರಿಗೆ ಬಿಡಿಎ ಅಥವಾ ಗೃಹ ಮಂಡಳಿಯಿಂದ ಮನೆಗಳನ್ನು ಕಟ್ಟಿಸಿಕೊಡಬೇಕು.
– ಕೊರೊನಾ ವೈರಸ್ ಸಂಕಷ್ಟದಲ್ಲಿ ಇರುವ ಚಾಲಕರ ವಾಹನಗಳನ್ನು ಅನಧಿಕೃತವಾಗಿ ಮುಟ್ಟುಗೋಲು ಹಾಕಿಕೊಳ್ಳುವುದು ಹಾಗೂ ದುಬಾರಿ ಬಟ್ಟಿ ವಸೂಲಿ ಮಾಡುವುದನ್ನು ನಿಲ್ಲಿಸಬೇಕು.
-ವಾಹನಗಳ ಕಂತುಗಳ ಮೇಲಿನ ಹೆಚ್ಚುವರಿ ಬಡ್ಡಿಯನ್ನು ತೆಗೆದುಕೊಳ್ಳುವುದನ್ನು ನಿಲ್ಲಿಸಬೇಕು. ಬಡ್ಡಿ ವಜಾ ಮಾಡಲು ಸರ್ಕಾರ ಕ್ರಮಕೈಗೊಳ್ಳಬೇಕು.
– ಹೊಸ ಆಟೋರಿಕ್ಷಾ ಮಾರಾಟ ತೆರಿಗೆಯನ್ನು 17% ರಿಂದ 5%ಕ್ಕೆ ಇಳಿಸಬೇಕು.
– ನಕಲಿ ಆಟೋ ಪರ್ಮಿಟ್ಗಳನ್ನು ತಡೆಗಟ್ಟಲು, ಹೊಸದಾಗಿ ತಂದಿರುವ ಇ-ಪರ್ಮಿಟ್ಗೆ ಆಧಾರ್ ಲಿಂಕ್ ಹಾಗೂ ಮಾಲೀಕನೇ ಖುದ್ದು ಹೆಬ್ಬೆಟ್ಟು ಗುರುತು ನೀಡುವುದನ್ನು ಕಡ್ಡಾಯಗೊಳಿಸಬೇಕು.