Breaking News

ಧರ್ಮ ಜಾಗೃತಿ ಇದ್ದರೆ ಸಮಾಜದಲ್ಲಿ ಶಾಂತಿ, ನೆಮ್ಮದಿ ಸಾಧ್ಯ’

Spread the love

ಮೂಡಲಗಿ: ‘ಧರ್ಮದ ಜಾಗೃತಿ ಇದ್ದರೆ ಸಮಾಜದಲ್ಲಿ ಶಾಂತಿ, ನೆಮ್ಮದಿ ನೆಲಸಲು ಸಾಧ್ಯವಿದೆ’ ಎಂದು ಬೆಳಗಾವಿ ಸಂಸದ ಜಗದೀಶ ಶೆಟ್ಟರ ಹೇಳಿದರು.

ತಾಲ್ಲೂಕಿನ ಯಾದವಾಡದ ಬಸವೇಶ್ವರ ವೃತ್ತದಲ್ಲಿ ನೂತನವಾಗಿ ನಿರ್ಮಿಸಿರುವ ಗಜಾನನ ಮಂದಿರದ ಉದ್ಘಾಟನೆ, ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಹಾಗೂ ನವಗ್ರಹ ಮೂರ್ತಿಗಳ ಪ್ರತಿಷ್ಠಾಪನೆಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

 

ಬೆಳಗಾವಿ ಜಿಲ್ಲೆಯನ್ನು ಮಾದರಿಯಾಗಿಸುವ ನಿಟ್ಟಿನಲ್ಲಿ ಅಭಿವೃದ್ಧಿಯ ಬಗ್ಗೆ ಅಧಿವೇಶದನದಲ್ಲಿ ಪ್ರಸ್ತಾಪಿಸಿರುವೆ. ಸಂಸದರ ಅಭಿವೃದ್ಧಿ ನಿಧಿಯಿಂದ ಯಾದವಾಡಕ್ಕೆ ಸಮುದಾಯ ಭವನ ಇಲ್ಲವೆ ಗ್ರಾಮಸ್ಥರು ತಿಳಿಸುವ ಕೆಲಸವನ್ನು ಮಾಡಿಕೊಡುತ್ತೇನೆ ಎಂದರು.

ಮಾಜಿ ಶಾಸಕ ಜಗದೀಶ ಮೆಟಗುಡ್ಡ ಮಾತನಾಡಿದರು.

ಡಾ. ಶಿವಲಿಂಗ ಮುರುಘರಾಜೇಂದ್ರ ಶಿವಾಚಾರ್ಯ ಸ್ವಾಮೀಜಿ, ಚೌಕಿ ಮಠದ ಶಿವಯೋಗಿ ದೇವರು, ತೊಂಡಿಕಟ್ಟಿ ವೆಂಕಟೇಶ ಮಹಾರಾಜರು, ಸಿದ್ದಪ್ರಭಾ ಸ್ವಾಮೀಜಿ, ಚನ್ನಬಸಪ್ಪ ಮುತ್ಯಾ ಹುಬ್ಬಳ್ಳಿ ಸಾನ್ನಿಧ್ಯ ವಹಿಸಿದ್ದರು.


Spread the love

About Laxminews 24x7

Check Also

ನಮಗೆ ಇ.ಡಿ ಸಮನ್ಸ್ ಮೂಲಕ ಕಿರುಕುಳ ನೀಡಲಾಗುತ್ತಿದೆ: ಡಿಸಿಎಂ ಡಿ.ಕೆ.ಶಿವಕುಮಾರ್

Spread the loveಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಹಾಗೂ ಯಂಗ್ ಇಂಡಿಯಾ ಸಂಸ್ಥೆಗಳಿಗೆ ದೇಣಿಗೆ ನೀಡಿದ್ದಕ್ಕೆ ಜಾರಿ ನಿರ್ದೇಶನಾಲಯ (ಇ.ಡಿ) ಸಮನ್ಸ್ ನೀಡಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ