Breaking News

155 ರೈತರಿಗೆ ಕೃಷಿ ಪರಿಕರ ವಿತರಣೆ

Spread the love

ಮಕನಮರಡಿ: ರೈತರಿಗೆ ಕಡಿಮೆ ಖಚ್ಚಿನಲ್ಲಿ ಡ್ರೋನ್ ಮೂಲಕ ಔಷಧ ಸಿಂಪಡಣೆ ಮತ್ತು ಸರ್ಕಾರ ರಿಯಾಯಿತಿ ದರದಲ್ಲಿ ರೈತರಿಗೆ ಅನುಕೂಲವಾಗುವಂತಹ ಸಲಕರಣೆಗಳನ್ನು ನೀಡುತ್ತಿದ್ದು, ಅವರ ಆರ್ಥಿಕಮಟ್ಟ ಸುಧಾರಣೆಗೆ ಅನಕೂಲವಾಗಿದೆ ಎಂದು ಬೆಳಗಾವಿ ಜಿಲ್ಲಾ ಉಸ್ತುವರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.

 

ಸಮೀಪದ ಹತ್ತರಗಿ ಸುಕ್ಷೇತ್ರದ ಕಾರಿಮಠದಲ್ಲಿ ಶನಿವಾರ ನಡೆದ ಹುಕ್ಕೇರಿ ಕೃಷಿ ಇಲಾಖೆಯ ಸಹಯೋಗದಲ್ಲಿ ಯಮಕನಮರಡಿ ಹೊಬಳಿ ಮಟ್ಟದ 155 ಫಲಾನುಭವಿಗಳಿಗೆ ಕೃಷಿ ಇಲಾಖೆಯಿಂದ ವಿವಿಧ ಯೋಜನೆಗಳ ಸವಲತ್ತು ವಿತರಣಾ ಕಾರ್ಯಕ್ರಮ ಹಾಗೂ ರೈತರ ಹೊಲದಲ್ಲಿ ಸೋಯಾಬಿನ್, ಅವರೆ ಬೆಳೆಗೆ ಡ್ರೋನ್ ಮೂಲಕ ಔಷಧ ಸಿಂಪಡಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

35 ತುಂತುರ ನೀರಾವರಿ ಪೈಪ್, 100 ತಾಡಪತ್ರಿ, 2 ರಾಶಿ ಮಶೀನ, 4 ಪವರ್ ಟೇಲರ್, 4 ನೇಗಿಲು, 4 ರೋಟರ್‌ ಯಂತ್ರ, 3 ಬೆಳೆ ಹೊಡೆಯುವ ಪೆಟ್ರೋಲ್‌ ಪಂಪ್‌ ಸೇರಿ ಒಟ್ಟು 155 ರೈತರಿಗೆ ₹75 ಲಕ್ಷ ಮೊತ್ತದ ಸಲಕರಣೆಗಳನ್ನು ರಿಯಾಯಿತಿ ನೀಡಲಾಗಿದೆ ಎಂದರು.

ಹತ್ತರಗಿ ಕಾರಿಮಠದ ಸುಕ್ಷೇತ್ರದ ಗುರುಸಿದ್ದ ಸ್ವಾಮೀಜಿ ಸಾನ್ನಿಧ್ಯ ವಹಿಸಿ ಮಾತನಾಡಿದರು.


Spread the love

About Laxminews 24x7

Check Also

ಬಿಜೆಪಿ ಮುಖಂಡನ ಪುತ್ರನ ವಿರುದ್ಧ ಅತ್ಯಾಚಾರ ಕೇಸ್: ಮಗುವಿನ ಜನ್ಮ ನೀಡಿದ ಸಂತ್ರಸ್ತೆ

Spread the loveಮಂಗಳೂರು, ): ಪುತ್ತೂರು ಬಿಜೆಪಿ ಮುಖಂಡನ ಪುತ್ರನ (Puttur BJP leader Son )ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ