Breaking News

ಏಕಾಂಗಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸಿಎಂ‌ ಸಿದ್ದರಾಮಯ್ಯನವರ ಅಭಿಮಾನಿ‌

Spread the love

ಯಾದಗಿರಿ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ದ ರಾಜ್ಯಪಾಲರು ಪ್ರಾಸಿಕ್ಯೂಷನ್‌ ಗೆ ಅನುಮತಿ ನೀಡಿದ ಕಾರಣಕ್ಕೆ ಯಾದಗಿರಿ ನಗರದಲ್ಲಿ‌ ಸಿದ್ದರಾಮಯ್ಯನವರ ಅಭಿಮಾನಿಯೊಬ್ಬ‌ ಏಕಾಂಗಿ ಉಪವಾಸ ಸತ್ಯಾಗ್ರಹ ಕೈಗೊಂಡಿದ್ದಾನೆ

ನಗರದ ಸುಭಾಷ್ಚಂದ್ರ ಬೋಸ್ ವೃತ್ತದ ಬಳಿ ಸಿದ್ದರಾಮಯ್ಯನವರ ಅಭಿಮಾನಿ‌ ರಾಜಕುಮಾರ ಎಂಬಾತ ಏಕಾಂಗಿ ಉಪವಾಸ ಸತ್ಯಾಗ್ರಹ ಕುಳಿತಿದ್ದಾನೆ.

 

ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರ ನಡೆಯನ್ನು ಖಂಡಿಸಿ ಸತ್ಯಾಗ್ರಹ ಕೈಗೊಂಡಿದ್ದು, ಬಿಜೆಪಿ ಹಾಗೂ‌ ಜೆಡಿಎಸ್ ನಾಯಕರು ರಾಜಭವನವನ್ನು ದುರುಪಯೋಗಿಸಿಕೊಂಡು ರಾಜ್ಯ ಮುಖ್ಯಮಂತ್ರಿಗಳ ತೆಜೋವಧೆ ಮಾಡುತ್ತಿದ್ದಾರೆ ಎಂದು ರಾಜಕುಮಾರ ಆರೋಪಿಸಿದರು.

ಉಪವಾಸ ಸತ್ಯಾಗ್ರಹಕ್ಕೆ ಮೂಲ ಕಾರಣ‌ ಸಿದ್ದರಾಮಯ್ಯನವರ ಸಾಹೇಬರ ಮೇಲಿನ ಅಭಿಮಾನ ಹಾಗೂ ಪ್ರೀತಿ, ಮುಡಾ ಪ್ರಕರಣದಲ್ಲಿ ನಮ್ಮ‌ ಸಿಎಂ ಅವರ ಪಾತ್ರವಿಲ್ಲ, ಅವರು‌ ಭ್ರಷ್ಟಾಚಾರ ರಹಿತ ಆಡಳಿತ ನೀಡಿದ ಮುಖ್ಯಮಂತ್ರಿಗಳು ಎಂದು ಹೇಳಿದರು.

ಶೋಕಾಸ್ ನೋಟಿಸ್ ಹಿಂಪಡೆಯುವ ತನಕ ಅನಿರ್ಧಿಷ್ಟ ಉಪವಾಸ ಸತ್ಯಾಗ್ರಹವನ್ನು ಕೈಗೊಳ್ಳುತ್ತೇನೆ ಎಂದು ಎಚ್ಚರಿಕೆಯನ್ನು ‌ರಾಜಕುಮಾರ ನೀಡಿದ್ದಾರೆ.


Spread the love

About Laxminews 24x7

Check Also

ಡಿಕೆಶಿ ಪಕ್ಷದ ಅಧ್ಯಕ್ಷರು. ರಾಜಣ್ಣ ಪಕ್ಷದ ಶಾಸಕರು. ಅವರಿಬ್ಬರು ಭೇಟಿ ಆಗಿರುವುದರಲ್ಲಿ ತಪ್ಪೇನಿದೆ ಎಂದ ಶಾಸಕ ಲಕ್ಷ್ಮಣ್​​

Spread the loveಚಿಕ್ಕೋಡಿ: “ಡಿಸಿಎಂ ಡಿ.ಕೆ.ಶಿವಕುಮಾರ್​​​ ಮತ್ತು ಮಾಜಿ ಸಚಿವ ಕೆ.ಎನ್​​.ರಾಜಣ್ಣ ಭೇಟಿ ಆಗಿರುವುದಲ್ಲಿ ತಪ್ಪೇನು? ಅವರು ಪಕ್ಷದ ಅಧ್ಯಕ್ಷರು, ಇವರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ