ಜನುಮ- ಜನುಮದ ಅನುಬಂಧ ಈ ರಕ್ಷಾ ಬಂಧನ- ಶಾಸಕ ಬಾಲಚಂದ್ರ ಜಾರಕಿಹೊಳಿ

Spread the love

ಜನುಮ- ಜನುಮದ ಅನುಬಂಧ ಈ ರಕ್ಷಾ ಬಂಧನ- ಶಾಸಕ ಬಾಲಚಂದ್ರ ಜಾರಕಿಹೊಳಿ

ದೊಡ್ಮನೆ ಕುಟುಂಬದಲ್ಲಿ ಹರ್ಷೊಲ್ಲಾಸದಿಂದ ನಡೆದ ರಾಖಿ ಹಬ್ಬ

ತಮ್ಮ ಸಹೋದರಿ ಲಕ್ಷ್ಮೀ ಅವರಿಂದ ರಾಖಿ ಕಟ್ಟಿಸಿಕೊಂಡು ಸಂಭ್ರಮಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಗೋಕಾಕ- ನಮ್ಮ ಭಾರತೀಯ ಸಂಸ್ಕೃತಿಯಲ್ಲಿ ರಕ್ಷಾ ಬಂಧನವು ವಿಶೇಷ ಮಹತ್ವವಿದ್ದು, ಸಹೋದರ- ಸಹೋದರಿಯರ ಪ್ರೀತಿ, ವಾತ್ಸಲ್ಯವನ್ನು ಬಿಂಬಿಸುವ ಹಬ್ಬವಾಗಿದೆ ಎಂದು ಅರಭಾವಿ ಶಾಸಕ ಮತ್ತು ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು.

ಸೋಮವಾರದಂದು ನಗರದ ಹೊಸಪೇಟೆ ರಸ್ತೆಯಲ್ಲಿರುವ ತಮ್ಮ ಲಕ್ಷ್ಮೀ ನಿವಾಸದಲ್ಲಿ ಸಹೋದರಿಯವರಿಂದ ರಾಖಿ ಕಟ್ಠಿಸಿಕೊಂಡು ಮಾತನಾಡಿದ ಅವರು, ಪ್ರತೀ ವರ್ಷವೂ ಈ ರಾಖಿ ಹಬ್ಬವನ್ನು ನಾವೆಲ್ಲ ಆಚರಿಸಿಕೊಂಡು ಬರುತ್ತಿದ್ದೇವೆ ಎಂದು ತಿಳಿಸಿದರು.

ಪ್ರತಿಯೊಬ್ಬ ಸಹೋದರಿಯರು ಸಮಾಜದ ದುಷ್ಟ ಶಕ್ತಿಗಳಿಂದ ರಕ್ಷಿಸಲೆಂದು ತಮ್ಮ ಸಹೋದರರಿಗೆ ರಾಖಿಯನ್ನು ಕಟ್ಟುತ್ತಾರೆ. ಪ್ರತಿಯಾಗಿ ಸಹೋದರರು ಕೂಡ ತಮ್ಮ ಭ್ರಾತತ್ವ ಪ್ರೀತಿಯನ್ನು ಉಜ್ವಲಗೊಳಿಸಲು ಸಹೋದರಿಯರಿಗೆ ಬೆನ್ನೆಲುಬು ನಿಲ್ಲುತ್ತಾರೆ ಎಂದು ತಿಳಿಸಿದರು.

ಪ್ರಾಚೀನ ಕಾಲದಿಂದಲೂ ಶ್ರಾವಣ ಮಾಸದಲ್ಲಿ ಆಚರಿಸುವ ರಕ್ಷಾ ಬಂಧನವು ಒಡ ಹುಟ್ಟಿದವರ ನಡುವಿನ ವಾತ್ಸಲ್ಯವನ್ನು ಬಿಂಬಿಸುವ ಹಬ್ಬವೇ ಈ ರಕ್ಷಾ ಬಂಧನವಾಗಿದೆ ಎಂದು ಅವರು ಹೇಳಿದರು.

ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಸಹೋದರಿಯಾದ ಲಕ್ಷ್ಮಿ ಅವರು ಬಾಲಚಂದ್ರ ಜಾರಕಿಹೊಳಿ ಅವರಿಗೆ ಹಣೆಗೆ ತಿಲಕವನ್ನಿಟ್ಟು ಆರತಿಯನ್ನು ಬೆಳಗಿ ಅವರಿಗೆ ರಾಖಿಯನ್ನು ಕಟ್ಟುವ ಮೂಲಕ ಈ ಮಹತ್ವಪೂರ್ಣ ರಕ್ಷಾ ಬಂಧನ ಹಬ್ಬಕ್ಕೆ ಸಾಕ್ಷಿಯಾದರು.

ಈ ಸಂದರ್ಭದಲ್ಲಿ ಲಕ್ಷ್ಮೀ ನಾಯಕ ಅವರ ಪುತ್ರ ಅಭಿಷೇಕ ಮತ್ತು ಪುತ್ರಿ ಅರುಣಾ ಅವರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ರಾಜ್ಯದಲ್ಲಿರುವ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಆಪರೇಷನ್ ಆರಂಭ

Spread the loveಬೆಂಗಳೂರು: ಬಾಂಗ್ಲಾ ದೇಶೀಯರು ಸೇರಿದಂತೆ ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರು ವವರನ್ನು ಪತ್ತೆ ಹಚ್ಚಿ, ಗಡೀಪಾರು ಮಾಡುವ ಕಾರ್ಯಾಚರಣೆಯನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ