Breaking News

ಗಣೇಶ ಹಬ್ಬ ಆಚರಣೆ ಸಂಬಂಧ ಶೀಘ್ರದಲ್ಲಿ ‘ಗೈಡ್ ಲೈನ್ಸ್’ ಪ್ರಕಟ

Spread the love

ಬೆಂಗಳೂರು : ಮುಂಬರುವ ಗಣೇಶ ಹಬ್ಬ ಆಚರಣೆ ಸಂಬಂಧ ಶೀಘ್ರದಲ್ಲಿ ಗೈಡ್ಲೈನ್ಸ್ ಪ್ರಕಟಿಸುತ್ತೇವೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ತಿಳಿಸಿದರು.

ಇಂದು ಗಣೇಶ ಚತುರ್ಥಿ ಆಚರಣೆ ಸಂದರ್ಭದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಬಿಬಿಎಂಪಿ ಮತ್ತು ಬೆಂಗಳೂರು ನಗರ ಪೊಲೀಸ್ ಜಂಟಿ ಸಹಯೋಗದಲ್ಲಿ ಟೌನ್ ಹಾಲ್ ನಲ್ಲಿ ನಡೆದ ಶಾಂತಿ ಸಭೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸ್ಪೀಕರ್, ಪೆಂಡಾಲ್ ಮೆರವಣಿಗೆಯ ಬಗ್ಗೆ ಗೈಡ್ಲೈನ್ಸ್ ಪ್ರಕಟಿಸುತ್ತೇವೆ ಎಂದು ತಿಳಿಸಿದರು.

 

ಸಾರ್ವಜನಿಕರಿಗೆ ತೊಂದರೆ ಆಗದಂತೆ ಹಾಗೂ ಟ್ರಾಫಿಕ್ ಆಗದಂತೆ ಕ್ರಮ ಕೈಗೊಳ್ಳಲಾಗುತ್ತದೆ. ಬೆಂಗಳೂರಿನ ಸೂಕ್ಷ್ಮ ಪ್ರದೇಶಗಳಲ್ಲಿ ಎಚ್ಚರ ವಹಿಸುವ ಕೆಲಸ ಆಗುತ್ತಿದೆ. ಅಲ್ಲದೆ ರೌಡಿಶೀಟರ್ ಗಳ ಬಗ್ಗೆಯೂ ಗಮನಹರಿಸುತ್ತೇವೆ.ಗಣೇಶ ಹಬ್ಬದ ಪ್ರಯುಕ್ತ ಸಾರ್ವಜನಿಕರಿಗೆ ಅನುವಾಗುವಂತೆ ಪಾಲಿಕೆಯ 63 ಉಪ ವಿಭಾಗ ಕಛೇರಿಗಳಲ್ಲಿ ಬಿಬಿಎಂಪಿ, ಪೊಲೀಸ್, ಬೆಸ್ಕಾಂ ಮತ್ತು ಅಗ್ನಿಶಾಮಕ ಅಧಿಕಾರಿಗಳನ್ನು ಒಳಗೊಂಡ ಸಮಿತಿಯನ್ನು ರಚಿಸಿ ಏಕಗವಾಕ್ಷಿ ಕೇಂದ್ರಗಳನ್ನು ತೆರೆಯಲಾಗುಗುವುದು ಎಂದು ತಿಳಿಸಿದರು.


Spread the love

About Laxminews 24x7

Check Also

ರಸ್ತೆಗುಂಡಿ ಮುಚ್ಚಲು ನೀಡಿದ್ದ ಗಡುವು ಅಂತ್ಯ: ‘Please ask D.K.Shivakumar’ ಎಂದ ಸಿದ್ದರಾಮಯ್ಯ

Spread the loveಬೆಂಗಳೂರು: ರಾಜಧಾನಿಯಲ್ಲಿ ಹಾಳಾಗಿರುವ ರಸ್ತೆ ಗುಂಡಿಗಳನ್ನು ಮುಚ್ಚುವಂತೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಅಧಿಕಾರಿಗಳಿಗೆ ನೀಡಿದ್ದ ಗಡುವು ಇಂದಿಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ