ಆನಂದಪುರ: ಕಳೆದ ಎರಡು ದಿನಗಳ ಹಿಂದೆ ಸುರಿದ ಭಾರಿ ಮಳೆಯಿಂದ ಮುಂಬಾಳ ಹಾಗು ಸೂಳಗೊಡು ಗ್ರಾಮದಲ್ಲಿ ನಾಟಿ ಮಾಡಿದ ಗದ್ದೆಗಳಿಗೆ ಭಾರಿ ಹಾನಿ ಉಂಟಾಗಿದೆ.
ಮತ್ತೆ ಬುಧವಾರ ಸಂಜೆ ಸುರಿದ ಭಾರಿ ಮಳೆಯಿಂದ ಆನಂದಪುರ ಹಳೆ ಸಂತೆ ಮಾರುಕಟ್ಟೆ ಹಾಗು ಹೆದ್ದಾರಿ ಪಕ್ಕದ ಹೋಟೆಲ್, ದಿನಸಿ ಅಂಗಡಿಗಳಿಗೆ ನೀರು ನುಗ್ಗಿದ್ದು.
ಅರ್ಧ ತಾಸಿಗೂ ಅಧಿಕ ಕಾಲ ಸುರಿದ ಭಾರಿ ಮಳೆಯಿಂದ ಹೆದ್ದಾರಿಯಲ್ಲಿಯೂ ಬಾರಿ ಪ್ರಮಾಣದ ನೀರು ಹರಿದು ಜನರಲ್ಲಿ ಆತಂಕ ಉಂಟಾಗಿತ್ತು.