Breaking News

ಸರ್ಕಾರದ ಸೌಲಭ್ಯಕ್ಕಾಗಿ ಒಗ್ಗಟ್ಟಾಗಿ: ಶೆಟ್ಟರ್‌

Spread the love

ರಾಮದುರ್ಗ: ‘ವೀರಶೈವ ಲಿಂಗಾಯತ ಒಳಪಂಗಡಗಳು ಸಮಾಜದ ಪ್ರತಿಭಾವಂತರಿಗೆ ಹಾಗೂ ಸಾಧಕರಿಗೆ ಪ್ರೋತ್ಸಾಹಿಸಲು ಪ್ರೇರಣೆ ನೀಡಬೇಕು’ ಎಂದು ಬೆಳಗಾವಿ ಸಂಸದ ಜಗದೀಶ ಶೆಟ್ಟರ್‌ ಹೇಳಿದರು.

ಇಲ್ಲಿನ ಕರ್ನಾಟಕ ಬಣಜಿಗ ಸಮಾಜದ ಕ್ಷೇಮಾಭಿವೃದ್ಧಿ ಸಂಘ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ, ಸನ್ಮಾನ ಸಮಾರಂಭ ಉದ್ಘಾಟಿಸಿ ಮಾತನಾಡಿ, ‘ಸರ್ಕಾರದ ಸೌಲಭ್ಯಕ್ಕಾದರೂ ಲಿಂಗಾಯತ ಸಮಾಜವನ್ನು ಒಟ್ಟಾಗಿಸುವ ಕಾರ್ಯ ಮಾಡಬೇಕು’ ಎಂದರು.

 

‘ರಾಜ್ಯದಲ್ಲಿ ಬಣಜಿಗ ಸಮಾಜದ ಎಲ್ಲ ತಾಲ್ಲೂಕು ಘಟಕಗಳು ಕ್ರಿಯಾಶೀಲವಾಗಿ ಕೆಲಸ ಮಾಡುತ್ತಿವೆ. ಆದರೆ ರಾಜ್ಯ ಘಟಕದ ಸಂಘಟನೆಯಲ್ಲಿ ಕೊರತೆ ಇದೆ. ಅದನ್ನು ಶೀಘ್ರದಲ್ಲಿ ಶಮನಗೊಳಿಸಿ ರಾಜ್ಯದಲ್ಲಿ ಮತ್ತೆ ಸಂಘಟನೆಗೆ ಚುರುಕುಗೊಳಿಸಲು ಪ್ರಯತ್ನಿಸಲಾಗುವುದು’ ಎಂದು ಹೇಳಿದರು.

‘ಬೆಳಗಾವಿ ಜನ ಹುಬ್ಬಳ್ಳಿಯಿಂದ ಬಂದ ನನಗೆ ಆಶಿರ್ವಾದ ಮಾಡಿದ್ದಾರೆ. ನಿಮ್ಮೆಲ್ಲರ ಪ್ರೀತಿ ವಿಶ್ವಾಸಕ್ಕೆ ಋಣಿಯಾಗಿದ್ದೇನೆ. ದಿ.ಸುರೇಶ ಅಂಗಡಿಯವರ ಕಾರ್ಯಗಳನ್ನು ಪೂರ್ತಿಗೊಳಿಸಿ ಧಾರವಾಡ- ಬೆಳಗಾವಿ ರೈಲು ಸಂಪರ್ಕ ಕೆಲಸ ಮತ್ತು ಸವದತ್ತಿ ಹಾಗೂ ರಾಮದುರ್ಗಕ್ಕೆ ರೈಲು ಸಂಪರ್ಕ ಕಲ್ಪಿಸಲು ಕೇಂದ್ರ ರೇಲ್ವೆ ಸಚಿವರಿಗೆ ಮನವಿ ಮಾಡಿದ್ದೇನೆ’ ಎಂದು ತಿಳಿಸಿದರು.


Spread the love

About Laxminews 24x7

Check Also

2 ವರ್ಷಗಳಿಂದ ಆರಂಭವಾಗದ ಶುದ್ಧ ನೀರಿನ ಘಟಕಗಳು

Spread the loveಹಾವೇರಿ: ನಗರದ ನಿವಾಸಿಗಳಿಗೆ ಶುದ್ಧ ಕುಡಿಯುವ ನೀರು ಸಿಗಲಿ ಎಂದು ಶಾಸಕರ ಅನುದಾನದಲ್ಲಿ ಆರು ಶುದ್ಧ ಕುಡಿಯುವ ನೀರಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ