Breaking News

ವೈದ್ಯಕೀಯ ಕೇಸ್​ ಅಂತೇಳಿ ಅಕ್ರಮವಾಗಿ 46 ಬಿಪಿಎಲ್​ ಕಾರ್ಡ್​ ಕೊಟ್ಟ ಆಹಾರ ಶಿರಸ್ತುದಾರ

Spread the love

ಬೆಂಗಳೂರು:ಹೊಸ ಕಾರ್ಡ್​ಗಾಗಿ ಅರ್ಜಿದಾರರು 3 ವರ್ಷದಿಂದ ಜಾತಕಪಕ್ಷಿಯಂತೆ ಕಾಯುತ್ತಿರುವ ನಡುವೆಯೂ ಅರ್ಹತೆ ಹೊಂದಿಲ್ಲದ 46 ಮಂದಿಗೆ ಅಕ್ರಮವಾಗಿ ಬಿಪಿಎಲ್​ ಕಾರ್ಡ್​ ಮಂಜೂರು ಮಾಡಿರುವುದು ಆಹಾರ ಇಲಾಖೆಯಲ್ಲಿ ಬೆಳಕಿಗೆ ಬಂದಿದೆ.

ಚಿಕ್ಕಮಗಳೂರು ಜಿಲ್ಲೆಯ ತರೀಕೆರೆಯಲ್ಲಿ ಆಹಾರ ಶಿರಸ್ತುದಾರನಾಗಿ ಕಾರ್ಯನಿರ್ವಹಿಸುತ್ತಿರುವ ಜಿ.

ತಿಮ್ಮಯ್ಯ ಎಂಬುವರು, ಲಂಚ ಪಡೆದು ವಿಶೇಷ ‘ವೈದ್ಯಕಿಯ ಕೇಸ್​’ ವಿನಾಯಿತಿ ದುರ್ಬಳಕೆ ಮಾಡಿಕೊಂಡು ಅನಧಿಕೃತವಾಗಿ 46 ಬಿಪಿಎಲ್​ ಚೀಟಿ ಕೊಟ್ಟಿರುವುದು ಚಿಕ್ಕಮಗಳೂರು ಜಿಲ್ಲಾಧಿಕಾರಿ, ಆಹಾರ ಇಲಾಖೆ ಆಯುಕ್ತರಿಗೆ ಕೊಟ್ಟಿರುವ ವರದಿಯಲ್ಲಿ ಬಹಿರಂಗವಾಗಿದೆ.

ರಾಜ್ಯ ಸರ್ಕಾರ ಹೊಸ ಪಡಿತರ ಚೀಟಿ ಮಂಜೂರು, ಸೇರ್ಪಡೆ, ತಿದ್ದುಪಡಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ.

ಹೀಗಾಗಿ, ಹೊಸ ರೇಷನ್​ ಕಾರ್ಡ್​ಗೆ ಅರ್ಜಿ ಸಲ್ಲಿಸಿ ಮೂರು ವರ್ಷದಿಂದ ಕಾಯುತ್ತಿರುವವರಿಗೆ ಹಾಗೂ ಅರ್ಜಿ ಸಲ್ಲಿಸಲು ಸಿದ್ಧತೆ ನಡೆಸುತ್ತಿರುವವರಿಗೆ ತೀವ್ರ ನಿರಾಸೆಯಾಗಿದೆ. ಆದರೆ, ಕ್ಯಾನ್ಸರ್​,ಕಿಡ್ನಿ,ಹೃದಯ ಸೇರಿ ಇತರೆ ಗಂಭೀರ ಕಾಯಿಲೆಗಳಿಂದ ಬಳಲುತ್ತಿರುವವರಿಗೆ ಹೊಸ ಬಿಪಿಎಲ್​ ನೀಡುವಂತೆ ಆಹಾರ ಇಲಾಖೆಗೆ ಸರ್ಕಾರ ಅನುಮತಿ ಕೊಟ್ಟಿದೆ. ಹಾಗಾಗಿ, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವ ಉದ್ದೇಶದಿಂದ 3 ವರ್ಷದ ಹಿಂದೆ ಸಲ್ಲಿಕೆಯಾದ ಅರ್ಜಿಗಳು ಮತ್ತು ಈಗ ಸಲ್ಲಿಸುವ ಅರ್ಜಿಯನ್ನು ವಿಶೇಷ ‘ವೈದ್ಯಕಿಯ ಕೇಸ್​’ ಎಂದು ಪರಿಗಣಿಸಿ ಇಲಾಖೆಯಿಂದ ಬಿಪಿಎಲ್​ ನೀಡಲಾಗುತ್ತಿದೆ.

ಇದನ್ನೇ ದುರ್ಬಳಕೆ ಮಾಡಿಕೊಂಡ ಆಹಾರ ಶಿರಸ್ತುದಾರ, ‘ವೈದ್ಯಕಿಯ ಕೇಸ್​’ ಅಡಿ ಸಲ್ಲಿಕೆಯಾಗಿರುವ 2 ಅರ್ಜಿಗಳಿಗೆ ಕಾರ್ಡ್​ ನೀಡಬೇಕಿತ್ತು. ಆದರೆ, ಎರಡು ಕಾರ್ಡ್​ ಬದಲಾಗಿ ‘ವೈದ್ಯಕಿಯ ಕೇಸ್​’ ದುರ್ಬಳಕೆ ಮೂಲಕ 46 ಬಿಪಿಎಲ್​ ಚೀಟಿಯನ್ನು ಲಾಗಿನ್​ನಲ್ಲಿ ನೀಡಿರುವುದು ಕಂಡುಬಂದಿದೆ. ಕರ್ತವ್ಯದಲ್ಲಿ ಪದೇಪದೆ ಲೋಪವೆಸಗುತ್ತಿರುವುದು, ಅನೇಕ ಬಾರಿ ಎಚ್ಚರಿಕೆ ನೀಡಿದ್ದರೂ ತಿದ್ದಿಕೊಂಡಿಲ್ಲ. ಹಾಗಾಗಿ, ಕರ್ನಾಟಕ ರಾಜ್ಯ ನಾಗರಿಕ ಸೇವಾ( ನಡತೆ) ನಿಯಮ ಅನ್ವಯ ಈ ಅಧಿಕಾರಿ ವಿರುದ್ಧ ಶಿಸ್ತು ಕ್ರಮ ಜರುಗಿಸುವಂತೆ ಇಲಾಖೆಗೆ ಜಿಲ್ಲಾಧಿಕಾರಿ ಕೋರಿದ್ದಾರೆ.


Spread the love

About Laxminews 24x7

Check Also

2 ವರ್ಷಗಳಿಂದ ಆರಂಭವಾಗದ ಶುದ್ಧ ನೀರಿನ ಘಟಕಗಳು

Spread the loveಹಾವೇರಿ: ನಗರದ ನಿವಾಸಿಗಳಿಗೆ ಶುದ್ಧ ಕುಡಿಯುವ ನೀರು ಸಿಗಲಿ ಎಂದು ಶಾಸಕರ ಅನುದಾನದಲ್ಲಿ ಆರು ಶುದ್ಧ ಕುಡಿಯುವ ನೀರಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ