Breaking News

ಜೈಲಲ್ಲಿರುವ ದರ್ಶನ್‌ ಮತ್ತೊಂದು ಫೋಟೋ ಲೀಕ್; ನಿನ್ನೆ ಕೈಲಿ ಸಿಗ್ರೇಟ್​ ಇಂದು ಮೊಬೈಲ್

Spread the love

ಬೆಂಗಳೂರು:​ ಸ್ನೇಹಿತೆ ಪವಿತ್ರಾ ಗೌಡ ಅವರಿಗೆ ಚಿತ್ರದುರ್ಗದ ಮೂಲವ ರೇಣುಕಾಸ್ವಾಮಿ ಅಶ್ಲೀಲ ಸಂದೇಶ ಕಳುಸಹಿಸಿದ್ದಾನೆ ಎಂದು ಸ್ಯಾಂಡಲ್​ವುಡ್ ನಟ ದರ್ಶನ್ ಆತನನ್ನು ಕೊಲೆ ಮಾಡಿದ್ದಾರೆ ಎನ್ನುವ ಆರೋಪದಲ್ಲಿ ಡಿ ಗ್ಯಾಂಗ್​ ಜೈಲಿನಲ್ಲಿದೆ. ಈ ಪ್ರಕರಣ ತನಿಕೆ ಹಂತದಲ್ಲಿ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿರುವಾಗ ಈಗ ಕೆಲವು ಫೋಟೋ ಹಾಗೂ ವಿಡಿಯೋಗಳು ಮತ್ತೊಂದು ಹಂತದಲ್ಲಿ ಸುದ್ದಿ ಮಾಡುತ್ತಿವೆ.

ನಿನ್ನೆ ಒಂದು ಫೋಟೋ ವಿಡಿಯೋ ಆದ್ರೆ ಇಂದೂ ಒಂದು ಫೋಟೋ ವೈರಲ್​​ ಆಗಿದೆ.

ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನಗೆ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ಆರೋಪಕ್ಕೆ ಪುಷ್ಠಿ ನೀಡುವಂತೆ ನಿನ್ನೆ ದರ್ಶನ ತನ್ನ ಸಹಚರರ ಜೊತೆ ಕುಳಿತು ಸಿಗರೇಟ್ ಎಳೆಯುತ್ತಿರುವ ಫೋಟೋವೊಂದು ವೈರಲ್ ಆಗಿತ್ತು. ಸ್ವಲ್ಪ ಸಮಯ ರೌಡಿಶೀಟರ್​ ಜತೆ ವಿಡಿಯೋ ಕಾಲ್​ ಮಾಡಿರುವ ವಿಡಿಯೋ ಕೂಡಾ ಸಂಚಲ ಸೃಷ್ಟಿ ಮಾಡಿತ್ತು.

ಈಗ ಮತ್ತೊಂದು ಫೋಟೋ ಸಿಕ್ಕಿದ್ದು, ಈ ಫೋಟೋದಲ್ಲಿ ದರ್ಶನ್ ಬೆಡ್ ಮೇಲೆ ಕುಳಿತುಕೊಂಡಿದ್ದು, ಕೈಯಲ್ಲಿ ಮೊಬೈಲ್ ಫೋನ್ ಹಿಡಿದುಕೊಂಡು ಚಾಟ್ ಮಾಡುತ್ತಿರುವ ದೃಶ್ಯವಿದೆ. ಇದು ಪರಪ್ಪನ ಅಗ್ರಹಾರ ಜೈಲಾಧಿಕಾರಿಗಳ ಬಗ್ಗೆ ಅನುಮಾನ ಮೂಡುವಂತೆ ಮಾಡಿದೆ.

ದರ್ಶನ್‌ ಜೈಲಿನಲ್ಲಿ ಆರಾಮವಾಗಿಯೇ ಇದ್ದಾರೆ ಎನ್ನುವ ಎಂಬ ಮಾಹಿತಿ ಸಿಕ್ಕಿದೆ. ಈ ಘಟನೆಯಿಂದ ಇದರಿಂದ ಪರಪ್ಪನ ಅಗ್ರಹಾರ ಜೈಲಿನ ಮತ್ತೊಂದು ಮುಖ ಬಯಲಾಗುತ್ತಿದೆ ಎನ್ನುವ ಮಾತು ಕೇಳಿ ಬರುತ್ತಿದೆ.


Spread the love

About Laxminews 24x7

Check Also

2 ವರ್ಷಗಳಿಂದ ಆರಂಭವಾಗದ ಶುದ್ಧ ನೀರಿನ ಘಟಕಗಳು

Spread the loveಹಾವೇರಿ: ನಗರದ ನಿವಾಸಿಗಳಿಗೆ ಶುದ್ಧ ಕುಡಿಯುವ ನೀರು ಸಿಗಲಿ ಎಂದು ಶಾಸಕರ ಅನುದಾನದಲ್ಲಿ ಆರು ಶುದ್ಧ ಕುಡಿಯುವ ನೀರಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ