Breaking News

ದರ್ಶನ್‌ ನ್ನು ಪರಪ್ಪನ ಅಗ್ರಹಾರದಿಂದ ಬೇರೆಡೆ ಸ್ಥಳಾಂತರಿಸುವ ಆಲೋಚನೆ :ಸಿದ್ದರಾಮಯ್ಯ

Spread the love

ಬೆಳಗಾವಿ: ‘ಕೊಲೆ ಆರೋಪಿ, ನಟ ದರ್ಶನ್‌ ಅವರನ್ನು ಪರಪ್ಪನ ಅಗ್ರಹಾರದಿಂದ ಬೇರೆಡೆ ಸ್ಥಳಾಂತರಿಸುವ ಆಲೋಚನೆ ನಡೆದಿದೆ. ಅಧಿಕಾರಿಗಳ ಮಟ್ಟದಲ್ಲಿ ನಿರ್ಧಾರ ಮಾಡುತ್ತಾರೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಸಮೀಪದ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸೋಮವಾರ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಅವರು, ‘ಬೆಳಗಾವಿಯ ಹಿಂಡಲಗಾ ಜೈಲಿಗೆ ಸ್ಥಳಾಂತರಿಸಬೇಕೋ, ಬೇರೆಡೆ ಕಳಿಸಬೇಕೋ ಎಂಬುದನ್ನು ಇನ್ನೂ ನಿರ್ಧರಿಸಿಲ್ಲ’ ಎಂದರು.

 

ಜೈಲಿನಲ್ಲಿ ವಿಶೇಷ ಆತಿಥ್ಯ ನೀಡಿದ ವಿಚಾರವಾಗಿ ಏಳು ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ. ಗೃಹಸಚಿವ ಡಾ.ಜಿ.ಪರಮೇಶ್ವರ ಅವರು ಖುದ್ದು ಪರಿಶೀಲನೆ ನಡೆಸಲಿದ್ದಾರೆ. ಇನ್ನೂ ಯಾರ್‍ಯಾರ ಮೇಲೆ ಕ್ರಮ ಜರುಗಿಸಬೇಕೋ ಅದನ್ನು ಮಾಡುತ್ತೇವೆ’ ಎಂದರು.


Spread the love

About Laxminews 24x7

Check Also

ಅಥಣಿ ನಗರದಲ್ಲಿ ಇಂದು ರೋಟರಿ ಸಂಸ್ಥೆ ಅಧೀನದಲ್ಲಿ ಶ್ರೀ ಜ್ಯೋತಿಬಾ ದೇವಸ್ಥಾನ ಆವರಣದಲ್ಲಿ ನೂತನವಾಗಿ ನಿರ್ಮಿಸಿದ ರೋಟರಿ ಉದ್ಯಾನವನ

Spread the loveಅಥಣಿ ನಗರದಲ್ಲಿ ಇಂದು ರೋಟರಿ ಸಂಸ್ಥೆ ಅಧೀನದಲ್ಲಿ ಶ್ರೀ ಜ್ಯೋತಿಬಾ ದೇವಸ್ಥಾನ ಆವರಣದಲ್ಲಿ ನೂತನವಾಗಿ ನಿರ್ಮಿಸಿದ ರೋಟರಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ