Breaking News

ಬಂಗಾಳಕೊಲ್ಲಿಯಲ್ಲಿ ನಿವಾರ್ ಸೈಕ್ಲೋನ್ ಆರ್ಭಟ ಬೆಂಗಳೂರಿನಲ್ಲಿಯೂ ಗಾಳಿ ಸಹಿತ ತುಂತುರು ಮಳೆ

Spread the love

ಚೆನ್ನೈ/ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ನಿವಾರ್ ಸೈಕ್ಲೋನ್ ಆರ್ಭಟ ಆರಂಭವಾಗಿದ್ದು, ತಮಿಳುನಾಡಿಗೆ ತಡರಾತ್ರಿ ಎಂಟ್ರಿ ಕೊಟ್ಟಿದೆ. ಇದೀಗ ಬೆಂಗಳೂರಿನಲ್ಲಿಯೂ ಗಾಳಿ ಸಹಿತ ತುಂತುರು ಮಳೆ

ಆರಂಭವಾಗಿದೆ.ಮಾಮಲ್ಲಾಪುರಂ ಮತ್ತು ಕಾರೈಕಲ್ ಸಮುದ್ರ ತೀರಕ್ಕೆ ಎಂಟ್ರಿ ಕೊಟ್ಟ ಸೈಕ್ಲೋನ್, ಗಂಟೆಗೆ 120 ಕಿಲೋ ಮೀಟರ್ ವೇಗದಲ್ಲಿ ಅಪ್ಪಳಿಸಿದೆ. ಚಂಡಿ ಅಬ್ಬರಕ್ಕೆ ತಮಿಳುನಾಡು, ಪುದುಚೇರಿ ತತ್ತರಿಸಿ ಹೋಗಿದೆ.

ನಿನ್ನೆ ರಾತ್ರಿ 11.30ರ ಸುಮಾರಿಗೆ ಪುದುಚೇರಿಗೆ ಅಪ್ಪಳಿಸಿದ ನಿವಾರ್, ಇಂದು ನಸುಕಿನ ಜಾವ 2.30ರ ಸುಮಾರಿಗೆ ತಮಿಳುನಾಡಿಗೆ ಎಂಟ್ರಿ ಕೊಟ್ಟಿದೆ. ನಸುಕಿನ ಜಾವ 3ರ ಬಳಿಕ ಚಂಡಮಾರುತದ ತೀವ್ರತೆ ಸ್ವಲ್ಪ ತಗ್ಗಿದೆ.

ಈ ಮಾರುತ ಮುಂದಿನ 3 ಗಂಟೆಗಳಲ್ಲಿ ಗಂಟೆಗೆ 60-65 ಕಿ.ಮೀ ವೇಗ ಪಡೆಯಲಿದೆ. ಗಾಳಿಯ ವೇಗ ಗಂಟೆಗೆ 145 ಕಿಲೋ ಮೀಟರ್ ಎಂದು ಅಂದಾಜಿಸಲಾಗಿತ್ತು. ಆದರೆ ಗಂಟೆಗೆ 110-120 ಕಿ.ಮೀ ವೇಗದಲ್ಲಿ ದ ಸೈಕ್ಲೋನ್ ಅಪ್ಪಳಿಸಿದೆ. ಸೈಕ್ಲೋನ್ ಪ್ರಭಾಗ ತಗ್ಗಿದರೂ ತಮಿಳುನಾಡಿನಲ್ಲಿ ಮಳೆ ಮುಂದುವರಿದಿದೆ.


Spread the love

About Laxminews 24x7

Check Also

ಕೋಕಾ-ಕೋಲಾ ಸಂಸ್ಥೆಯೊಂದಿಗೆ ವಿಜಯಪುರವನ್ನು ಕೈಗಾರಿಕಾ ಕೇಂದ್ರವಾಗಿ ಪರಿಗಣಿಸಲು ಸಚಿವ ಎಂ.ಬಿ.ಪಾಟೀಲ ಚರ್ಚೆ

Spread the love ಕೋಕಾ-ಕೋಲಾ ಸಂಸ್ಥೆಯೊಂದಿಗೆ ವಿಜಯಪುರವನ್ನು ಕೈಗಾರಿಕಾ ಕೇಂದ್ರವಾಗಿ ಪರಿಗಣಿಸಲು ಸಚಿವ ಎಂ.ಬಿ.ಪಾಟೀಲ ಚರ್ಚೆ ಭಾರತದ ಆಹಾರ ಸಂಸ್ಕರಣಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ