Breaking News

ಶಾಸಕ ರವಿಕುಮಾರ್ ವಿರುದ್ಧ ಮಾನನಷ್ಟ ಮೊಕದ್ದಮೆ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ

Spread the love

ಹುಬ್ಬಳ್ಳಿ: ‌‌’ರಾಜ್ಯ ಸರ್ಕಾರ ಉರುಳಿಸಲು ಬಿಜೆಪಿ ನಾಯಕರು ಕಾಂಗ್ರೆಸ್ ಶಾಸಕರಿಗೆ ಆಮಿಷವೊಡ್ಡಿದ್ದಾರೆ ಎಂದು ಆರೋಪಿಸಿರುವ ಮಂಡ್ಯ ಶಾಸಕ ಪಿ.ರವಿಕುಮಾರ್ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಲಾಗುವುದು’ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು.

‘ಮುಡಾ ಹಾಗೂ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಗಳನ್ನು ಮರೆ ಮಾಚಲು ಶಾಸಕರ ಖರೀದಿ ಕುರಿತು ಅಪಪ್ರಚಾರ ಮಾಡಲಾಗುತ್ತಿದೆ’ ಎಂದು ಅವರು ಸೋಮವಾರ ಸುದ್ದಿಗಾರರಿಗೆ ತಿಳಿಸಿದರು.

 

‘ಕಾಂಗ್ರೆಸ್ ಶಾಸಕರಿಗೆ ₹50 ರಿಂದ ₹100 ಕೋಟಿ ಆಮಿಷವೊಡ್ಡುತ್ತಿದ್ದಾರೆ ಎಂದು ರವಿಕುಮಾರ್ ಆರೋಪಿಸಿದ್ಧಾರೆ.
ಬಿಜೆಪಿಯ 66 ಶಾಸಕರಿದ್ದು, ಅದರಲ್ಲಿ ಇಬ್ಬರು ಪಕ್ಷದ್ರೋಹ ಎಸಗಿದ್ದಾರೆ. ಸರ್ಕಾರ ರಚನೆಗೆ ನಮಗೆ ಇನ್ನೂ 64 ಶಾಸಕರ ಅಗತ್ಯವಿದೆ. ಅವರ ಆರೋಪದ ಪ್ರಕಾರ ಶಾಸಕರಿಗೆ ₹6,600 ಕೋಟಿ ಕೊಡಬೇಕು. ಅಷ್ಟು ಹಣ ಎಲ್ಲಿಂದ ಬರುತ್ತದೆ? ಅವರ ಆರೋಪ ಬಾಲಿಶತನದ್ದು’ ಎಂದರು.

‘ನಮ್ಮ ಯಾವ ಮುಖಂಡರೂ ಕಾಂಗ್ರೆಸ್‌ ಶಾಸಕರಿಗೆ ಆಮಿಷವೊಡ್ಡಿಲ್ಲ. ಆಮಿಷವೊಡ್ಡಿದವರು ಯಾರು ಎಂಬುದನ್ನು ಅವರು ಬಹಿರಂಗಪಡಿಸಬೇಕು. ಕಾಂಗ್ರೆಸ್‌ ಅಸಹಾಯಕ ಸ್ಥಿತಿಯಲ್ಲಿದ್ದು, ಹೀಗಾಗಿ ತಮ್ಮ ಶಾಸಕರ ಮೂಲಕ ಸುಳ್ಳು ಆರೋಪ ಮಾಡಿಸಲಾಗುತ್ತಿದೆ’ ಎಂದು ಹೇಳಿದರು.


Spread the love

About Laxminews 24x7

Check Also

ನಾಗನೂರು ಪಟ್ಟಣದಲ್ಲಿ ವಿಭಾಗ ಹಾಗೂ ರಾಜ್ಯಮಟ್ಟದ ಖೋ ಖೋ ಟೂರ್ನಿಯಲ್ಲಿ ಸಂಸದೆ ಪ್ರಿಯಾಂಕ ಜಾರಕಿಹೊಳಿ ಭಾಗಿ

Spread the love ನಾಗನೂರು ಪಟ್ಟಣದಲ್ಲಿ ವಿಭಾಗ ಹಾಗೂ ರಾಜ್ಯಮಟ್ಟದ ಖೋ ಖೋ ಟೂರ್ನಿಯಲ್ಲಿ ಸಂಸದೆ ಪ್ರಿಯಾಂಕ ಜಾರಕಿಹೊಳಿ ಭಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ