Breaking News

ಅಣೆಕಟ್ಟೆಯಿಂದ ನೀರು ಬಿಡುಗಡೆ, ಹಳೆ ಸೇತುವೆ ಮುಳುಗಡೆ

Spread the love

ಅಣೆಕಟ್ಟೆಯಿಂದ ನೀರು ಬಿಡುಗಡೆ, ಹಳೆ ಸೇತುವೆ ಮುಳುಗಡೆ

ರಾಮದುರ್ಗ: ಸವದತ್ತಿಯ ನವೀಲು ತೀರ್ಥ ಅಣೆಕಟ್ಟೆಯಿಂದ 10 ಸಾವಿರಕ್ಕೂ ಹೆಚ್ಚಿನ ನೀರು ಹರಿಸಿದ್ದರಿಂದ ತಾಲ್ಲೂಕಿನ ಹಳೆ ಸೇತುವೆ ಸಂಪೂರ್ಣ ಮುಳುಗಡೆಯಾಗಿ ವಾಹನಗಳ ಸಂಚಾರ ಸ್ಥಗಿತವಾಗಿದೆ.

ಹಳೇ ಸೇತುವೆ ಮೇಲೆ ನಾಲ್ಕು ಐದು ಅಡಿಯಷ್ಟು ನೀರು ಹರಿಯುತ್ತಿದ್ದು ಪಕ್ಕದಲ್ಲಿದ್ದ ಜಾನಕಿರಾಮ ದೇವಸ್ಥಾನ ಜಲಾವೃತವಾಗಿದೆ.

ನವೀಲು ತೀರ್ಥ ಅಣೆಕಟ್ಟೆ ಒಟ್ಟು 2079.50 ಅಡಿ ಸಾಮರ್ಥ್ಯ ಹೊಂದಿದ್ದು, ಈಗಾಗಲೇ ಅಣೆಕಟ್ಟೆಯಲ್ಲಿ 2078.10 ಅಡಿ ನೀರು ಸಂಗ್ರಹವಾಗಿದೆ. ಒಳ ಹರಿವು ಹೆಚ್ಚಿರುವ ಕಾರಣ ಮಲಪ್ರಭಾ ನದಿಗೆ 10 ಸಾವಿರ ಕ್ಯುಸೆಕ್‌ ನೀರು ಬಿಡುವುದಾಗಿ ಅಣೆಕಟ್ಟೆ ಅಧಿಕಾರಿಗಳು ತಿಳಿಸಿದ್ದಾರೆ.


Spread the love

About Laxminews 24x7

Check Also

ರಾಜ್ಯದಲ್ಲಿರುವ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಆಪರೇಷನ್ ಆರಂಭ

Spread the loveಬೆಂಗಳೂರು: ಬಾಂಗ್ಲಾ ದೇಶೀಯರು ಸೇರಿದಂತೆ ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರು ವವರನ್ನು ಪತ್ತೆ ಹಚ್ಚಿ, ಗಡೀಪಾರು ಮಾಡುವ ಕಾರ್ಯಾಚರಣೆಯನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ