Breaking News

ತಜ್ಞರು, ಸಮುದಾಯದ ನಾಯಕರೊಂದಿಗೆ ಚರ್ಚಿಸಿ ಒಳ ಮೀಸಲಾತಿ ಜಾರಿ: ಸಿಎಂ ಸಿದ್ಧರಾಮಯ್ಯ

Spread the love

ಬೆಂಗಳೂರು: ಪರಿಶಿಷ್ಟ ಜಾತಿ ಸಮುದಾಯಕ್ಕೆ ಒಳಮೀಸಲಾತಿ ಕಲ್ಪಿಸಲು ನಾನು ಬದ್ಧನಾಗಿದ್ದು, ಇದರ ಬಗ್ಗೆ ಯಾವುದೇ ಅನುಮಾನ, ಅಪನಂಬಿಕೆ ಬೇಡ. ನಾನು ಈಗಾಗಲೇ ಸುಪ್ರೀಂಕೋರ್ಟ್ ತೀರ್ಪನ್ನು ಸ್ವಾಗತಿಸಿದ್ದೇನೆ ಎಂದು ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ.

ಸಚಿವರಾದ ಕೆ.ಹೆಚ್.

ಮುನಿಯಪ್ಪ, ಆರ್.ಬಿ.ತಿಮ್ಮಾಪುರ್, ಮಾಜಿ ಸಚಿವ ಹೆಚ್. ಆಂಜನೇಯ ಹಾಗೂ ಮಾಜಿ ರಾಜ್ಯಸಭಾ ಸದಸ್ಯರಾದ ಎಲ್. ಹನುಮಂತಯ್ಯ ಮತ್ತು ದಲಿತ ಶಾಸಕರು ಹಾಗೂ ಮುಖಂಡರ ನಿಯೋಗ ಇಂದು ಸಿಎಂ ಭೇಟಿಯಾಗಿ ಒಳ ಮೀಸಲಾತಿ ಜಾರಿ ಸಂಬಂಧ ಚರ್ಚೆ ನಡೆಸಿದ್ದಾರೆ.

ಈ ವೇಳೆ ಮಾತನಾಡಿದ ಸಿಎಂ, ಸುಪ್ರೀಂಕೋರ್ಟ್ ತೀರ್ಪಿನ ಬಗ್ಗೆ ಕಾನೂನು ತಜ್ಞರು ಮತ್ತು ಸಮುದಾಯದ ನಾಯಕರ ಜೊತೆ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳುತ್ತೇನೆ. ಒಳಮೀಸಲಾತಿಯನ್ನು ದಲಿತ ಸಮುದಾಯ ಒಮ್ಮತದಿಂದ ಒಪ್ಪಿಕೊಂಡು ಅನುಷ್ಠಾನಕ್ಕೆ ಬೆಂಬಲ ನೀಡಿರುವುದು ಸ್ವಾಗತಾರ್ಹ ಕ್ರಮವಾಗಿದೆ ಎಂದು ಹೇಳಿದ್ದಾರೆ.

ನಾನು, ನಮ್ಮ ಪಕ್ಷ ಮತ್ತು ನಮ್ಮ ಸರ್ಕಾರಕ್ಕೆ ಸಾಮಾಜಿಕ ನ್ಯಾಯದ ಪರವಾದ ಖಚಿತ ಮತ್ತು ದೃಢ ನಿಲುವು ಇದೆ. ಇದರಲ್ಲಿ ಗೊಂದಲ ಇಲ್ಲವೇ ಇಲ್ಲ. ಮೀಸಲಾತಿಯ ಸೌಲಭ್ಯದ ನ್ಯಾಯಯುತ ಹಂಚಿಕೆಗೆ ಒಳಮೀಸಲಾತಿ ಅಗತ್ಯ ಎನ್ನುವುದು ಇತ್ತೀಚಿನ ದಿನಗಳಲ್ಲಿ ಎಲ್ಲರಿಗೂ ಅರಿವಾಗಿದೆ. ಸುಪ್ರೀಂ ಕೋರ್ಟ್ ತೀರ್ಪು ಕೂಡಾ ಇದೇ ಅಭಿಪ್ರಾಯವನ್ನು ಹೊಂದಿದೆ ಎಂದರು.


Spread the love

About Laxminews 24x7

Check Also

ಶಾಸಕ ಕೆ.ಸಿ.ವೀರೇಂದ್ರ ಮತ್ತೆ 6 ದಿನ ಇ.ಡಿ ಕಸ್ಟಡಿಗೆ

Spread the love ಬೆಂಗಳೂರು: ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ) ಅವರ ಐದು ದಿನಗಳ ಪೊಲೀಸ್ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ