Breaking News

ಕೊಯ್ನಾ ಜಲಾಶಯದಿಂದ ನೀರು ಬಿಡುವ ಸೂಚನೆ: ನದಿ ತೀರದಲ್ಲಿ ಎಚ್ಚರಿಕೆ

Spread the love

ಚಿಕ್ಕೋಡಿ: ಮಹಾರಾಷ್ಟ್ರ ಕೃಷ್ಣಾ ಹಾಗೂ ಉಪನದಿಗಳ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆ ಮುಂದುವರೆದಿದ್ದು, ಕೊಯ್ನಾ ಆಣೆಕಟ್ಟೆಯಿಂದ 32,100 ಕ್ಯುಸೆಕ್ ನೀರನ್ನು ಗುರುವಾರ ಬೆಳಿಗ್ಗೆ 6ರಿಂದ ಹರಿಬಿಡಲಾಗುವುದು ಎಂದು ಮಹಾರಾಷ್ಟ್ರದ ಅಧಿಕಾರಿಗಳು ತಿಳಿಸಿದ್ದಾರೆ.

 

105 ಟಿಎಂಸಿ ಅಡಿ ನೀರು ಸಂಗ್ರಹ ಸಾಮರ್ಥ್ಯದ ಈ ಜಲಾಶಯದಲ್ಲಿ 101.78 ಟಿಎಂಸಿ ಅಡಿ ನೀರು ಸಂಗ್ರಹವಾಗಿದೆ. ಕೊಂಕಣ ಪ್ರದೇಶದಲ್ಲಿ ಮಳೆ ಹೆಚ್ಚಾಗಿದ್ದರಿಂದ ಆಣೆಕಟ್ಟೆಯಿಂದ ನೀರು ಬಿಡಲು ನಿರ್ಧರಿಸಲಾಗಿದೆ.

ಚಿಕ್ಕೋಡಿ ಉಪ ವಿಭಾಗ ವ್ಯಾಪ್ತಿಯ ಕೃಷ್ಣಾ ನದಿ ತೀರದ ಜನರು ಜಾಗೃತೆಯಿಂದ ಇರಬೇಕೆಂದು ಚಿಕ್ಕೋಡಿ ಉಪ ವಿಭಾಗಾಧಿಕಾರಿ ಸುಭಾಷ್ ಸಂಪಗಾವಿ ಪ್ರಕಟಣೆ ತಿಳಿಸಿದ್ದಾರೆ.

ಈಗಾಗಲೇ ಚಿಕ್ಕೋಡಿ ತಾಲ್ಲೂಕಿನ ಕಲ್ಲೋಳ ಗ್ರಾಮದ ಬಳಿಯಲ್ಲಿ ಕೃಷ್ಣಾ ನದಿಗೆ ಬುಧವಾರ 11,3763 ಕ್ಯುಸೆಕ್ ನೀರು ಹರಿದು ಬರುತ್ತಿದ್ದು, ಉಪ ವಿಭಾಗ ವ್ಯಾಪ್ತಿಯಲ್ಲಿ 8ಕ್ಕೂ ಹೆಚ್ಚು ಸೇತುವೆಗಳು ಜಲಾವೃತಗೊಂಡಿವೆ. ಕೊಯ್ನಾ ಆಣೆಕಟ್ಟೆಯಿಂದ ಹೆಚ್ಚುವರಿಯಾಗಿ ನೀರು ಬಿಡುಗಡೆ ಮಾಡುತ್ತಿದ್ದರಿಂದ ನದಿ ತೀರದಲ್ಲಿ ಮತ್ತೇ ಪ್ರವಾಹದ ಆತಂಕ ಶುರುವಾಗಿದೆ.


Spread the love

About Laxminews 24x7

Check Also

ಅಥಣಿ ನಗರದಲ್ಲಿ ಇಂದು ರೋಟರಿ ಸಂಸ್ಥೆ ಅಧೀನದಲ್ಲಿ ಶ್ರೀ ಜ್ಯೋತಿಬಾ ದೇವಸ್ಥಾನ ಆವರಣದಲ್ಲಿ ನೂತನವಾಗಿ ನಿರ್ಮಿಸಿದ ರೋಟರಿ ಉದ್ಯಾನವನ

Spread the loveಅಥಣಿ ನಗರದಲ್ಲಿ ಇಂದು ರೋಟರಿ ಸಂಸ್ಥೆ ಅಧೀನದಲ್ಲಿ ಶ್ರೀ ಜ್ಯೋತಿಬಾ ದೇವಸ್ಥಾನ ಆವರಣದಲ್ಲಿ ನೂತನವಾಗಿ ನಿರ್ಮಿಸಿದ ರೋಟರಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ