Breaking News

ಎಂ ಎಸ್ ಆಯ್ ಎಲ್ ಮದ್ಯದ ಮಳಿಗೆಯನ್ನು ಸ್ಥಳಾಂತರ ಮಾಡುವುದು ಬೇಡ:

Spread the love

ಚನ್ನಮ್ಮನ ಕಿತ್ತೂರು : ಪಟ್ಟಣದ ಸೋಮವಾರ ಪೇಟೆಯಲ್ಲಿರುವ ಎಂ ಎಸ್ ಆಯ್ ಎಲ್ ಮದ್ಯದ ಮಳಿಗೆಯನ್ನು ಸ್ಥಳಾಂತರ ಮಾಡುವುದು ಬೇಡ ಎಂದು ಮಂಜುನಾಥ ಅಮರಪ್ಪನವರ ಹೇಳಿದರು.

ಗುರುವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದ ಇವರು. ಎಂ ಎಸ್ ಆಯ್ ಎಲ್ ಮದ್ಯದ ಮಳಿಗೆ ಮುಂದೆ ಅಷ್ಟೇ ಮಹಿಳೆಯರು, ವೃದ್ಧರು ಹಾಗೂ ಮಕ್ಕಳು ಓಡಾಡುವುದಿಲ್ಲ. ಪಟ್ಟಣದ ಕೋಟೆಯ ಮುಂದೆ ಇರುವ ಮದ್ಯದ ಅಂಗಡಿ ಸೇರಿದಂತೆ ಎಲ್ಲ ಮದ್ಯದ ಅಂಗಡಿಗಳ ಮುಂದೆ ಸಾರ್ವಜನಿಕರು ಓಡಾಡುತ್ತಾರೆ.

ಆದರೆ ಇದೇ ಅಂಗಡಿ ಮಾತ್ರ ಯಾಕೆ ಸ್ಥಳಾಂತರ ಮಾಡಬೇಕು. ಇದರಿಂದ ಯಾವುದೇ ಸಾರ್ವಜನಿಕರಿಗೆ ತೊಂದರೆ ಇಲ್ಲ. ಮದ್ಯದ ಮಳಿಗೆ ಸ್ಥಳಾಂತರ ಮಾಡುವುದಾದರೆ ಎಲ್ಲ ಮದ್ಯದ ಅಂಗಡಿಗಳನ್ನು ಸ್ಥಳಾಂತರ ಮಾಡಬೇಕು ಎಂದರು.

ಸಿದ್ದಪ್ಪ ಕರಡಿಗುದ್ದಿ, ಮಂಜುನಾಥ ಅಮರಾಪೂರ, ಭಿಮಪ್ಪ ಚವ್ಹಾನ, ರಮೇಶ ಇಂಚಲ, ಮಂಜುನಾಥ ಚವ್ಹಾನ, ಶಿವನಪ್ಪ ಹಣಜಿ, ಮಹೇಶ ಕದಂ, ಮಾರುತಿ ಕಲ್ಲವಡ್ಡರ, ಶಿವಾನಂದ ಜಡಿ ಸೇರಿದಂತೆ ಇತರರು ಇದ್ದರು.


Spread the love

About Laxminews 24x7

Check Also

8 ನೇ ದಿನಕ್ಕೆ ಕಾಲಿಟ್ಟ ಕಬ್ಬು ಬೆಳೆಗಾರರ ಹೋರಾಟ, ಸರ್ಕಾರಕ್ಕೆ ಸಂಜೆ 7 ಗಂಟೆಯ ಡೆಡ್‌ಲೈನ್‌

Spread the loveಬೆಳಗಾವಿ, ನವೆಂಬರ್ 6: ಬೆಲೆ ನಿಗದಿಗೆ ಆಗ್ರಹಿಸಿ ಕಬ್ಬು ಬೆಳೆಗಾರರು ನಡೆಸುತ್ತಿರುವ ಪ್ರತಿಭಟನೆ (Farmers Protest), ಹೋರಾಟದ ಕಾವು ದಿನದಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ