Breaking News

ಮಳೆಗಾಲದಲ್ಲಿ ನಗರದ ಜನತೆಗೆ ಯಾವ ಕಾರಣಕ್ಕೂ ಮಣ್ಣುಮಿಶ್ರಿತ ನೀರು ಸರಬರಾಜು ಮಾಡಬಾರದು:D.C.

Spread the love

ಬೆಳಗಾವಿ: ‘ಮಳೆಗಾಲದಲ್ಲಿ ನಗರದ ಜನತೆಗೆ ಯಾವ ಕಾರಣಕ್ಕೂ ಮಣ್ಣುಮಿಶ್ರಿತ ನೀರು ಸರಬರಾಜು ಮಾಡಬಾರದು. ಬದಲಿಗೆ, ಶುದ್ಧ ಕುಡಿಯುವ ನೀರು ಪೂರೈಕೆಗೆ ಒತ್ತು ನೀಡಬೇಕು’ ಎಂದು ಜಿಲ್ಲಾಧಿಕಾರಿ ಮೊಹಮ್ಮದ್‌ ರೋಷನ್ ಸೂಚಿಸಿದರು.

ಇಲ್ಲಿನ ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮದ(ಕೆಯುಐಡಿಎಫ್‌ಸಿ) ಕಚೇರಿಯಲ್ಲಿ ಬುಧವಾರ ನಡೆದ ಸಭೆಯಲ್ಲಿ ಅವರು ಮಾತನಾಡಿದರು.

 

‘ಈಗ ಪಾಲಿಕೆ ವ್ಯಾಪ್ತಿಯ 10 ವಾರ್ಡ್‌ಗಳಿಗೆ 24×7 ಮಾದರಿಯಲ್ಲಿ ಕುಡಿಯುವ ನೀರು ಸರಬರಾಜು ಯೋಜನೆ ಜಾರಿಯಲ್ಲಿದೆ. ಉಳಿದ ವಾರ್ಡ್‌ಗಳಿಗೆ ಯೋಜನೆ ವಿಸ್ತರಿಸುವ ಕಾಮಗಾರಿಗಳನ್ನು ಶೀಘ್ರವಾಗಿ ಪೂರ್ಣಗೊಳಿಸಬೇಕು. ನೀರು ಶುದ್ಧೀಕರಣ ಘಟಕ ಹಾಗೂ ಜಲ ಸಂಗ್ರಹಾಗಾರಗಳಲ್ಲಿ ಶುಚಿತ್ವ ಕಾಪಾಡಬೇಕು’ ಎಂದು ತಾಕೀತು ಮಾಡಿದರು.


Spread the love

About Laxminews 24x7

Check Also

ಖಮೇನಿ ಹತ್ಯೆ ಪ್ರತಿಭಟನೆಗಳ ಬಗ್ಗೆ ಪೋಸ್ಟ್‌ – ಕಾಶ್ಮೀರ ಸಂಸದರ ವಿರುದ್ಧ ಎಫ್‌ಐಆರ್‌

Spread the loveಶ್ರೀನಗರ: ಇರಾನ್‌ ಸರ್ವೋಚ್ಚ ನಾಯಕ ಅಯತೊಲ್ಲಾ ಖಮೇನಿ  ಹತ್ಯೆ ಪ್ರತಿಭಟನೆಗಳ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ