Breaking News

ಬಿಜೆಪಿ ಸದಸ್ಯ ಅಪಹರಣ; ಮೂವರ ಮೇಲೆ ಪ್ರಕರಣ

Spread the love

ನ್ನಮ್ಮನ ಕಿತ್ತೂರು: ಇಲ್ಲಿಯ ಪಟ್ಟಣ ಪಂಚಾಯಿತಿ ಚುನಾವಣೆಯ ಹಿನ್ನೆಲೆಯಲ್ಲಿ ಗುರುವಾರ ತಡರಾತ್ರಿ ಬಿಜೆಪಿ ಸದಸ್ಯ ನಾಗರಾಜ ಬಸವರಾಜ ಅಸುಂಡಿ (36) ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಚನ್ನಮ್ಮನ ಕಿತ್ತೂರು ಪೊಲೀಸರು ಮೂವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ತಾಲ್ಲೂಕಿನ ಮೇಟ್ಯಾಲ ಗ್ರಾಮದ ಅಶೋಕ ಚನ್ನಬಸಪ್ಪ ಮಾಳಗಿ, ಚನ್ನಾಪುರದ ಬಸವರಾಜ ಶೇಖಪ್ಪ ಸಂಗೊಳ್ಳಿ ಮತ್ತು ಕಿತ್ತೂರಿನ ಸೋಮವಾರ ಪೇಟೆಯ ಸುರೇಶ ಈರಪ್ಪ ಕಡೇಮನಿ ಆರೋಪಿಗಳು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ನಾಗರಾಜ ತಂದೆ ಬಸವರಾಜ ಈ ಬಗ್ಗೆ ದೂರು ನೀಡಿದ್ದಾರೆ.

ಪ್ರತಿಭಟನೆ: ಪಟ್ಟಣ ಪಂಚಾಯಿತಿ ಚುನಾವಣೆಯ ಹಿನ್ನೆಲೆಯಲ್ಲಿ ನಾಗರಾಜ ಅವರನ್ನು ಅಪಹರಣ ಮಾಡಲಾಗಿದೆ ಎಂದು ತಿಳಿಸಿರುವ ಬಿಜೆಪಿ ಮುಖಂಡರು, ಶುಕ್ರವಾರ ಪ್ರತಿಭಟನೆ ಮಾಡುವುದಾಗಿ ತಿಳಿಸಿದ್ದಾರೆ.


Spread the love

About Laxminews 24x7

Check Also

ಪಿಜಿ-ನೀಟ್ ದೇಶಕ್ಕೆ 9ನೇ RANK ಗಳಿಸಿದDr.ಶರಣಪ್ಪ

Spread the loveಪಿಜಿ-ನೀಟ್ ದೇಶಕ್ಕೆ 9ನೇ ರ‌್ಯಾಂಕ್ ಗಳಿಸಿದ ಡಾ.ಶರಣಪ್ಪ ಬಿಮ್ಸ್ ಮುಕುಟಕ್ಕೆ ಮತ್ತೊಂದು ಗರಿ ಬೆಳಗಾವಿ ವೈದ್ಯಕೀಯ ವಿಜ್ಞಾನಗಳ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ