Breaking News

ಬೆಂಗಳೂರಿನಿಂದ ಮಂಗಳೂರಿಗೆ ಕಾರಿನಲ್ಲಿ ಮಾದಕ ವಸ್ತು ಸಾಗಾಟ

Spread the love

ಮಂಗಳೂರು: ಕಾರಿನಲ್ಲಿ ಮಾದಕ ವಸ್ತು ಸಾಗಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಆರೋಪಿಗಳು ಬೆಂಗಳೂರಿನಿಂದ ಮಂಗಳೂರಿಗೆ ಬಾಡಿಗೆ ಕಾರಿನಲ್ಲಿ ಮಾದಕ ವಸ್ತುಗಳನ್ನು ಸಾಗಾಟ ಮಾಡುತ್ತಿದ್ದರು. ಎಂಡಿಎಂಎ ಸೇರಿದಂತೆ ಹಲವು ಮಾದಕ ವಸ್ತು ಹಾಗೂ ಕಾರು ಸಮೇತ ಪೊಲಿಸರು ಮೂವರನ್ನು ಬಂಧಿಸಿದ್ದಾರೆ.

BREAKING NEWS:  ಬೆಂಗಳೂರಿನಿಂದ ಮಂಗಳೂರಿಗೆ ಕಾರಿನಲ್ಲಿ ಮಾದಕ ವಸ್ತು ಸಾಗಾಟ: ಮೂವರು ಅರೆಸ್ಟ್

ಶಾಜಹಾನ್, ಮೊಹಮ್ಮದ್ ನಿಸಾರ್, ಮನ್ಸೂರ್ ಬಂಧಿತ ಆರೋಪಿಗಳು. ಬಂಧಿತರಿಂದ 2.10 ಲಕ್ಷ ಮೌಲ್ಯದ 42 ಗ್ರಾಂ ಎಂಡಿಎಂಎ ಜಪ್ತಿ ಮಾಡಲಾಗಿದೆ. ಬಾಡಿಗೆ ಕಾರಿನಲ್ಲಿ ಬೆಂಗಳೂರಿನಿಂದ ಮಂಗಳೂರಿಗೆ ಡ್ರಗ್ಸ್ ಸಾಗಾಟ ಮಾಡುತ್ತಿದ್ದರು. ಆರೋಪಿಗಳು ಕರ್ನಾಟಕ ಹಾಗೂ ಕೇರಳ ವಿದ್ಯಾರ್ಥಿಗಳಿಗೆ ಡ್ರಗ್ಸ್ ಮಾರಾಟ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಉಳಿದ ಆರೋಪಿಗಳಿಗಾಗಿ ಶೋಧ ಕಾರ್ಯ ಮುಂದುವರೆದಿದೆ.

ಮಂಗಳೂರು ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಡಿಕೆಶಿ ಪಕ್ಷದ ಅಧ್ಯಕ್ಷರು. ರಾಜಣ್ಣ ಪಕ್ಷದ ಶಾಸಕರು. ಅವರಿಬ್ಬರು ಭೇಟಿ ಆಗಿರುವುದರಲ್ಲಿ ತಪ್ಪೇನಿದೆ ಎಂದ ಶಾಸಕ ಲಕ್ಷ್ಮಣ್​​

Spread the loveಚಿಕ್ಕೋಡಿ: “ಡಿಸಿಎಂ ಡಿ.ಕೆ.ಶಿವಕುಮಾರ್​​​ ಮತ್ತು ಮಾಜಿ ಸಚಿವ ಕೆ.ಎನ್​​.ರಾಜಣ್ಣ ಭೇಟಿ ಆಗಿರುವುದಲ್ಲಿ ತಪ್ಪೇನು? ಅವರು ಪಕ್ಷದ ಅಧ್ಯಕ್ಷರು, ಇವರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ